ತಾತನ ಕ್ಷೇತ್ರದಲ್ಲಿ ಪ್ರಜ್ವಲ್ ನಾಮಪತ್ರ ಸಲ್ಲಿಕೆ!!!

ಹಾಸನ: 

      ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸಚಿವ ಎಚ್‌.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಇಂದು ಮಧ್ಯಾಹ್ನ 12:30ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

      ಪ್ರಜ್ವಲ್‌ ಅವರ ನಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಹಿತ ಸಚಿವ ಹೆಚ್‌.ಡಿ. ರೇವಣ್ಣ, ಭವಾನಿ ರೇವಣ್ಣ ಸಾಕ್ಷಿಯಾದರು. ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಜ್ವಲ್‌ ರೇವಣ್ಣ ಅವರು ತಂದೆ, ತಾಯಿ ಮತ್ತು ಚಿಕ್ಕಪ್ಪ ಕುಮಾರಸ್ವಾಮಿ ಅವರಿಗೆ ನಮಿಸಿದ್ದು ವಿಶೇಷವಾಗಿತ್ತು. ಪ್ರಜ್ವಲ್‌ ಅವರ ನಾಮಪತ್ರಕ್ಕೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸೂಚಕರಾಗಿ ಸಹಿ ಹಾಕಿದರು. 

      ತನ್ನ ತಾತ ಹೆಚ್‌.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಪ್ರತಿಷ್ಠಿತ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಾತ್ಮಕ ರಾಜಕೀಯ ಜೀವನವನ್ನು ಪ್ರಾರಂಭಿಸಲು ಉದ್ದೇಶಿಸಿರುವ ಪ್ರಜ್ವಲ್‌ ರೇವಣ್ಣ ಹಾಸನದಲ್ಲಿ ಭರ್ಜರಿ ರೋಡ್‌ ಶೋ ಮೂಲಕ ಸಾಗಿಬಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಮೆರವಣಿಗೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕಛೇರಿಗೆ ಬಂದು ಅಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

      ರೋಡ್‌ ಶೋ ಸಂದರ್ಭದಲ್ಲಿ ಅಭಿಮಾನಿಗಳು ಪ್ರಜ್ವಲ್‌ ಅವರಿಗೆ 800 ಕೆ.ಜಿ. ಸೇಬುಗಳಿಂದ ತಯಾರಿಸಿದ ಬೃಹತ್‌ ಹಾರವನ್ನು ಹಾಕಿದ್ದು ವಿಶೇಷವಾಗಿತ್ತು. ಜೆಡಿಎಸ್‌ ನಾಯಕ ಜಿ.ಟಿ. ದೇವೇಗೌಡ ಮತ್ತು ಕಾಂಗ್ರೆಸ್‌ ನ ಕೆಲವು ಸ್ಥಳೀಯ ಮುಖಂಡರು ಪ್ರಜ್ವಲ್‌ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap