ಬೆಂಗಳೂರಿನಲ್ಲಿ ಮತ್ತೆ ಶೂಟ್ ಔಟ್!!

ಬೆಂಗಳೂರು:

 

     ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಹೋದಾಗ ತನ್ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದಕ್ಕೆ ತಮ್ಮ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ.

      ಹೆಣ್ಣೂರು ಇನ್ಸ್​ಪೆಕ್ಟರ್ ಎಸ್.ಪಿ ಕುಲಕರ್ಣಿ ಆರೋಪಿ ಅಭಿಷೇಕ್(19) ಮೇಲೆ ಸೋಮವಾರ ರಾತ್ರಿ ಗುಂಡು ಹಾರಿಸಿ ಸೆರೆ ಹಿಡಿದ್ದಾರೆ. ಗುಂಡಿನ ದಾಳಿಯಿಂದ ಬಿದ್ದಿದ್ದ ಆತನನ್ನು ಈಗ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ

ಘಟನೆ ವಿವರ:

      ಕಳೆದ ಹಲವು ದಿನಗಳ ಹಿಂದೆ ಹೆಣ್ಣೂರು ವ್ಯಾಪ್ತಿಯಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. 

      ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಸೋಮವಾರ ರಾತ್ರಿ ಹೆಣ್ಣೂರು ಬಂಡೆ ಬಳಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಈ ಮಾಹಿತಿ ಆಧಾರದಲ್ಲಿ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಸಂತೋಷ್ ಮೇಲೆ ಚಾಕುವಿನಿಂದ ಅಭಿಷೇಕ್ ಹಲ್ಲೆ ನಡೆಸಿದ್ದಾನೆ.

      ಈ ವೇಳೆ ಎಚ್.ಡಿ ಕುಲಕರ್ಣಿ ಮೊದಲು ಆರೋಪಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದ್ಯಾವುದಕ್ಕೂ ಆರೋಪಿ ಹೆದರದೇ ಕುಲಕರ್ಣಿ ಮೇಲೆಯೇ ಹಲ್ಲೆ ನಡೆಸಲು ಬಂದಾಗ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap