ಬೆಂಗಳೂರು
ಕೇಂದ್ರ ಸಚಿವ ಅನಂತಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ವಿಶೇಷ ಸಭೆ ನಡೆಯಿತು.
ಅನಂತಕುಮಾರ್ ಅವರ ನಿಧನಕ್ಕೆ ಸಭೆ ತೀವ್ರ ದು:ಖ ವ್ಯಕ್ತಪಡಿಸಿ, ದೇಶ ಒಬ್ಬ ಅನುಭವಿ ನಾಯಕನನ್ನು ಕಳೆದುಕೊಂಡಿದೆ ಎಂದು ಶೋಕಿಸಿತು.
ಅನಂತಕುಮಾರ್ ಅವರು ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ಕೇಂದ್ರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ, ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಚಿವರಾಗಿ, ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅನೇಕ ಸಂಸದೀಯ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರಾಗಿ ಸಹ ಅವರು ಕೊಡುಗೆ ನೀಡಿದ್ದರು.ಸಚಿವ ಸಂಪುಟ ಸಭೆ ಅಗಲಿದ ನಾಯಕನ ಕುಟುಂಬಕ್ಕೆ ಸರ್ಕಾರ ಮತ್ತು ದೇಶದ ಪರವಾಗಿ ಸಂತಾಪ ವ್ಯಕ್ತಪಡಿಸಿತು.
ಅಗಲಿದ ಚೇತನದ ಸ್ಮರಣೆಯಲ್ಲಿ ಸಚಿವ ಸಂಪುಟದ ಸದಸ್ಯರು 2 ನಿಮಿಷಗಳ ಮೌನ ಆಚರಿಸಿದರು. ಅನಂತಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸುವ ಹಾಗೂ ಅವರ ಕೊಡುಗೆಯನ್ನು ಪ್ರಶಂಸಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ