ತುಮಕೂರು:
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಕೊಂಚ ಏರುಪೇರಾದ ಕಾರಣ ಶುಕ್ರವಾರ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ.
ಗುರುವಾರದಂದು ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಸೋಂಕು ತಗಲಿರುವ ಪರಿಣಾಮ ಅವರನ್ನು ಮತ್ತೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಹಾಗೆಯೇ ಇನ್ನು 4 ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಯುತ್ತದೆ. ಸದ್ಯ ಶ್ರೀಗಳು ಐಸಿಯುನಲ್ಲಿ ಮತ್ತಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.
ಸಿದ್ದಗಂಗಾ ಶ್ರೀಗಳನ್ನು ನೋಡಲು ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾದ್ದರಿಂದ ಅವರಿಗೆ ಸೋಂಕು ತಗುಲಿದೆ. ಇದು ಸೂಕ್ಷ್ಮವಾದ ಸಂಗತಿ ಹೀಗೆ ಸೋಂಕು ಹೆಚ್ಚಾದರೆ ಶ್ರೀಗಳಿಗೆ ತೊಂದರೆಯಾಗುತ್ತದೆ. ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಶ್ರೀಗಳು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀಗಳನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಸ್.ಎಂ.ಕೃಷ್ಣ ಅವರು ಪ್ರತ್ಯೇಕವಾಗಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ