ದಾವಣಗೆರೆ:
ಅನೈತಿಕ ಪೆÇಲೀಸ್ ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ತಮ್ಮ ಹೇಳಿಕೆಯನ್ನು ಹಿಂಪಡೆದು ನಾಡಿನ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎಸಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನಾಕಾರರು, ಅನೈತಿಕ ಪೆÇಲೀಸ್ಗಿರಿಯನ್ನು ಸಮರ್ಥಿಸಿಕೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉಪ ವಿಭಾಗಾಧಿಕಾರಿಗಳ ಮುಖಾಂತರ ಹೇಳಿಕೆ ವಾಪಸ್ ಪಡೆದು, ಕ್ಷಮೆಯಾಚಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅನೈತಿಕ ಪೆÇಲೀಸ್ಗಿರಿಯನ್ನು ಸಮರ್ಥಿಸುವ ದಾಟಿಯಲ್ಲಿ ಹೇಳಿಕೆ ನೀಡಿರುವುದನ್ನು ತಕ್ಷಣವೇ ಹಿಂಪಡೆದು, ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ತಹಸೀನ್ ಪೂನವಲ್ಲಾ ವಿರುದ್ಧ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು . ಯೂನಿಯನ್ ಇಂಡಿಯಾ ಪ್ರಕಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ, ಗುಂಪು ಹಿಂಸಾಚಾರವನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಟಾಸ್ಕ್ ಫೆÇೀರ್ಸ್ ರಚಿಸಬೇಕು. ಸಿಆರ್ಪಿಸಿ ಕಲಂ 357 ಅಡಿಯಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಶಕ್ತಿ ವಾಹಿನಿ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ಅಂತರ್ಜಾತಿ ಮತ್ತು ಅಂತರ್ಧಮಿಯ ವಿವಾಹಗಳನ್ನು ರಕ್ಷಿಸಲಿಕ್ಕಾಗಿ ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು ಅನೈತಿಕ ಪೆÇಲೀಸ್ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ನ ಜಬೀನಾ ಖಾನಂ, ಎಂ.ಕರಿಬಸಪ್ಪ, ಪಿಪಲ್ಸ್ ಲಾರ?ಸ್ ಗೀಲ್ಡ್ನ ಅನೀಷ ಪಾಷ, ಡಿಎಸ್-4ನ ಹೆಗ್ಗೆರೆ ರಂಗಪ್ಪ, ಗುಡ್ಡಪ್ಪ, ಸಿಐಟಿಯುನ ತಿಮ್ಮಣ್ಣ, ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯ ಅಬ್ದುಲ್ ಘನಿ ತಾಹೀರ್ ಮತ್ತಿತರರು ಭಾಗವಹಿಸಿದ್ದರು.
