ಇಂದು ಡಿ ಸಿ ,ಸಿಇಓಗಳ ಜೊತೆ ಸಿಎಂ ಸಭೆ : ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು: 

       ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘   ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

   ಬರಗಾಲಕ್ಕೆ ಸಂಬಂಧಿಸಿದಂತೆ, ಈ ತಿಂಗಳು ಕೆಲವು ಪ್ರದೇಶಗಳಲ್ಲಿ ಮಳೆಯಾಗಿರುವುದರಿಂದ ಅಂತಿಮ ಚಿತ್ರಣ ಸ್ಪಷ್ಟವಾಗುವುದಕ್ಕೆ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕೆಂದು ಕೆಲವು ತಜ್ಞರು ಸೂಚಿಸಿದ್ದಾರೆ. ರೈತ ಸಮುದಾಯಕ್ಕೆ ಲಾಭವಾಗಬೇಕಾದರೆ ನಿಯಮಾವಳಿಗಳನ್ನು ಸಡಿಲಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap