ಬೆಂಗಳೂರು :
ದಕ್ಷಿಣ ಭಾರತ ಚಿತ್ರರಂಗದಲ್ಲಿ ಕಲಾತಪಸ್ವಿ ಎಂದೇ ಪ್ರಸಿದ್ದರಾಗಿದ್ದ ಟಾಲಿವುಡ್ ನ ಕಾಶಿನಾಧುನಿ ವಿಶ್ವನಾಥ್ ಅವರು ಫೆಬ್ರವರಿ 2ರಂದು ದೈವಾಧೀನರಾಗಿದ್ದು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಇವರು ನಟನಾಗಿ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದರು ಅವರ ಸಾವು ಸಿನಿಮಾ ರಂಗಕ್ಕೆ ದೊಡ್ಡ ನಷ್ಟ ಎಂದು ಹಲವಾರು ಗಣ್ಯರು ಅಭಿಪ್ರಾಯ ಪಟ್ಟಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
![](https://prajapragathi.com/wp-content/uploads/2023/02/Untitled-3.jpg)