ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ : ಕಾರಣ ಗೊತ್ತಾ…?

ನವದೆಹಲಿ :

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಬೈಸ್ರಾನ್ ಕಣಿವಯೆಲ್ಲಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು. ಈ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು. ಇದರಲ್ಲಿ ಕರ್ನಾಟಕದವರೂ ಸೇರಿದ್ದಾರೆ. ಪಹಲ್ಗಾಮ್ ಘಟನೆಯ ನಂತರ, ಪ್ರವಾಸಿಗರಲ್ಲಿ ಭಯ ಮೂಡಿದೆ. ಯಾರೊಬ್ಬರೂ ಇಲ್ಲಿಗೆ ಬರಲು ಧೈರ್ಯ ಮಾಡುತ್ತಿಲ್ಲ. ಇದರಿಂದ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಸ್ಥಳೀಯರು ಭಯ ಬಿದ್ದಿದ್ದಾರೆ. ಆದರೆ, ನಟ ಅತುಲ್ ಕುಲಕರ್ಣಿ ಅವರು ಜಮ್ಮು-ಕಾಶ್ಮೀರಕ್ಕೆ ತೆರಳಿದ್ದು, ಪ್ರವಾಸಿಗರ ಬಳಿ ಇಲ್ಲಿಗೆ ಬರುವಂತೆ ಕೋರುತ್ತಿದ್ದಾರೆ.

ಭಯೋತ್ಪಾದಕ ದಾಳಿಯಿಂದಾಗಿ ಅನೇಕ ಜನರು ಕಾಶ್ಮೀರಕ್ಕೆ ಹೋಗಲು ಹೆದರುತ್ತಾ ಇದ್ದಾರೆ. ಕೆಲವರು ಮತ್ತೆಂದೂ ಕಾಶ್ಮೀರಕ್ಕೆ ಹೋಗುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಸ್ಥಳೀಯರು ಮಾತ್ರ ಇಲ್ಲಿಗೆ ಬರುವಂತೆ ಕೋರುತ್ತಿದ್ದಾರೆ. ಅದೇ ರೀತಿ, ನಟ ಅತುಲ್ ಕುಲಕರ್ಣಿ ಸ್ವತಃ ಕಾಶ್ಮೀರಕ್ಕೆ ಹೋಗುವ ಮೂಲಕ ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅತುಲ್ ಕುಲಕರ್ಣಿ ಮುಂಬೈನಿಂದ ಶ್ರೀನಗರಕ್ಕೆ ಪ್ರಯಾಣಿಸುವಾಗ ವಿಮಾನದಿಂದ ತೆಗೆದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಕಾಶ್ಮೀರಕ್ಕೆ ಪ್ರವಾಸಿಗರ ದಂಡೇ ಇರುತ್ತದೆ. ಆದರೆ ದಾಳಿಯ ನಂತರ, ವಿಮಾನವೂ ಖಾಲಿ ಇದೆ. ಈ ವಿಮಾನವು ಯಾವಾಗಲೂ ಪ್ರಯಾಣಿಕರಿಂದ ತುಂಬಿರುತ್ತದೆ ಎಂದು ಸಿಬ್ಬಂದಿ ಅತುಲ್‌ಗೆ ಮಾಹಿತಿ ನೀಡಿದರು. ‘ನಾವು ಈ ಜಾಗಗಳನ್ನು ಮತ್ತೆ ತುಂಬಬೇಕು’ ಎಂದು ಅವರು ಈ ಫೋಟೋದಲ್ಲಿ ಬರೆದಿದ್ದಾರೆ. ‘ಬನ್ನಿ, ಕಾಶ್ಮೀರಕ್ಕೆ ಹೋಗೋಣ.. ನಾನು ಬಂದಿದ್ದೇನೆ, ನೀವೂ ಬನ್ನಿ..’ ಎಂದು ಅವರು ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ. ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವುದು ಭಯೋತ್ಪಾದಕರ ಉದ್ದೇಶವಾಗಿತ್ತು. ಆದರೆ ಅತುಲ್ ಅವರ ಉದ್ದೇಶ ಈಡೇರಲು ಬಿಡುವುದಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.

ಈ ವಿಮಾನಗಳು ಭರ್ತಿಯಾಗಿದ್ದವು. ನಾವು ಅವುಗಳನ್ನು ಪುನಃ ತುಂಬಿಸಬೇಕಾಗಿದೆ. ನಾವು ಭಯೋತ್ಪಾದನೆಯನ್ನು ಸೋಲಿಸಲು ಬಯಸುತ್ತೇವೆ’ ಎಂದು ಅವರು ವಿಮಾನ ಪ್ರಯಾಣದ ಫೋಟೋಗಳನ್ನು ಪೋಸ್ಟ್ ಮಾಡಿ ಬರೆದಿದ್ದಾರೆ. ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಕಾಶ್ಮೀರದ ವೀಡಿಯೊಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಲು ಅಲ್ಲಿನ ನಾಗರಿಕರು ರ್ಯಾಲಿ ನಡೆಸುತ್ತಿರುವುದನ್ನು ಇದು ತೋರಿಸುತ್ತದೆ. ಅತುಲ್ ಅವರು ಕನ್ನಡದಲ್ಲಿ ‘ಆ ದಿನಗಳು’, ‘ಉಗ್ರಂ’, ‘ಯಕ್ಷ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ ಸಿನಿಮಾದಲ್ಲಿ ಅತುಲ್ ನಟಿಸುತ್ತಿದ್ದಾರೆ.

Recent Articles

spot_img

Related Stories

Share via
Copy link