ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಈ ಹಿಂದಿನ ಸರಕಾರದಿಂದ ಆರಂಭವಾಗಿದ್ದು, ಆದೆ ರೀತಿಯು ಈ ವರ್ಷ ಕೂಡ ಅದು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಕೈಬಿಡಬೇಕೆಂದು ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮುಖಂಡರು ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ ಈಗ ಜಯಂತಿ ಆಚರಣೆ ಮುಂದುವರಿಯಲಿದೆ ಎಂದು ಸಿಎಂ ಹೇಳಿದ್ದಾರೆ. ‘ಸರ್ವ ಜನಾಂಗದ ಶಾಂತಿಯ ತೋಟ..’ ಎಂಬ ಕುವೆಂಪು ವಿರಚಿತ ನಾಡಗೀತೆಯ ಸಾರ ಬಿಜೆಪಿ ಮುಖಂಡರಿಗೆ ತಿಳಿದಿಲ್ಲ ಎಂದು ಎಚ್ಡಿಕೆ ಟೀಕಿಸಿದರು.








