ಧಾರವಾಡ ಜಿಲ್ಲಾ ಯವ ಮೋರ್ಚಾ ಉಪಾಧ್ಯಕ್ಷನ ಹತ್ಯೆ…!

ಧಾರವಾಡ

      ಬಿಜೆಪಿ ಧಾರವಾಡ ಜಿಲ್ಲಾ ಯವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬಾತನನ್ನು ಏಪ್ರಿಲ್‌ 18 ಮಂಗಳವಾರ ಕೆಲ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

      ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
     ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಬಿಜೆಪಿ ಯುವ ಮುಖಂಡ ಹಾಗೂ ಕೋಟೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಹತ್ಯೆಯಾಗಿದೆ. ಪ್ರವೀಣ ಕಮ್ಮಾರ ಮೃತದೇಹ ಇರುವ ಎಸ್‌ಡಿಎಂ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಶಾಸಕ ಅಮೃತ ದೇಸಾಯಿ ಅವರು ಭೇಟಿ ನೀಡಿದ್ದಾರೆ.
    ಪ್ರವೀಣ ಕಮ್ಮಾರ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡಿದ್ದ. ನಿನ್ನೆ ತಾನೇ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್‍ಯಾಲಿಯಲ್ಲೂ ಭಾಗಿಯಾಗಿದ್ದರು. ಆದರೆ, ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಕಮ್ಮಾರನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap