ಮಂಡ್ಯ: ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

ಮಂಡ್ಯ: 

    ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ನಡೆಸಿದ ಆರೋಪ ಕೇಳಿ ಬಂದಿದೆ

    ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯೇ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು ಬೆಳ್ಳೂರು ಪೊಲೀಸ್ ಠಾಣೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ

    ಬೈಕ್ ಟಚ್ ಮಾಡಿಕೊಂಡು ಓವರ್‌ಟೇಕ್‌ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಶನಿವಾರ ಅಭಿಷೇಕ್ ಪ್ರಶ್ನೆ ಮಾಡಿದ್ದರು. ಅದೇ ದ್ವೇಷ ಮುಂದಿಟ್ಟುಕೊಂಡು ಇಂದು ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ.

ಅಷ್ಟೇ ಅಲ್ಲದೇ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Recent Articles

spot_img

Related Stories

Share via
Copy link
Powered by Social Snap