ಮಡಿಕೇರಿಗೆ ಅಖಿಲೇಶ್‌ ಯಾದವ್‌ ಭೇಟಿ…!

ಮಡಿಕೇರಿ: 

       ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಮ್ಗೆ ಭೇಟಿ ನೀಡಿ ಮಹಾನ್ ಸೇನಾನಿಯ ಸೇನಾ ಜೀವನದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹವಾಮಾನದಂತೆ ಮೈತ್ರಿಕೂಟದ ಸಭೆಯ ವಾತಾವರಣವೂ ಬಹಳ ಉತ್ತಮವಾಗಿತ್ತು. ಲೋಕಸಭಾ ಚುನಾವಣೆಯನ್ನು ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು.

    ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬಡತನ, ಹಾಗೇ ಇದೆ. ದಿನಬಳಕೆಯ ವಸ್ತುಗಳ ದರ ಹೆಚ್ಚುತ್ತಲೇ ಇದೆ. ನೋಟು ಅಮಾನ್ಯೀಕರಣದ ನಂತರವೂ ದೇಶದಲ್ಲಿ ಭ್ರಷ್ಟಾಚಾರ ಕೊನೆಯಾಗಲಿಲ್ಲ ಎಂದರೆ ನೋಟು ಅಮಾನ್ಯೀಕರಣ ನಿರ್ಧಾರವೇ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದು ಎಂದು ಹೇಳಬೇಕಾಗುತ್ತದೆ. ನೋಟು ಅಮಾನ್ಯೀಕರಣವನ್ನು ಸಮರ್ಥಿಸುವ ಒಂದೇ ಒಂದು ಕಾರಣವನ್ನೂ ಈವರೆಗೂ ಬಿಜೆಪಿಯಿಂದ ನೀಡಲಾಗಲಿಲ್ಲ ಎಂದು ಆರೋಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap