ಏಪ್ರಿಲ್ 5ರ ರಾತ್ರಿ 2.30ರ ವೇಳೆ ನಡೆದ ಛಲವಾದಿಪಾಳ್ಯದ ಚಂದ್ರು ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುರಿಸಿದ್ದಾರೆ. ಘಟನೆಯ ಮಾಹಿತಿಯನ್ನು ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು ಮಾಧ್ಯಮಗಳ ಮುಂದೆ ವಿವರಿಸಿದ್ದಾರೆ. ಆದರೂ, ಕೆಲ ವಿಕೃತ ಮನಸ್ಸಿನ ಸಂಘಟನೆಗಳು ಅಶಾಂತಿ ಸೃಷ್ಟಿಸೋ ದುರುದ್ದೇಶದಿಂದಲೇ ಚಾಮರಾಜಪೇಟೆ ಬಂದ್ ಗೆ ಕರೆ ಕೊಟ್ಟಿದ್ದರು.
ಆದರೆ, ನಮ್ಮ ಕ್ಷೇತ್ರದ ಜನ ಬುದ್ದಿವಂತರು. ಅವರಿಗೆ ಸತ್ಯ ತಿಳಿದಿದೆ. ಹಾಗಾಗಿ, ಕಿಡಿಗೇಡಿಗಳ ಬಂದ್ ಕರೆ ಸಂಪೂರ್ಣ ವಿಫಲವಾಗಿದೆ. ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿಲ್ಲ. ಎಲ್ಲವೂ ಯಥಾ ಪ್ರಕಾರ ಕಾರ್ಯನಿರ್ವಹಿಸುತ್ತಿವೆ ಎಂದು ಸ್ಪಷ್ಟನೆ ನೀಡಿದ ಚಾಮರಾಜಪೇಟೆ ಶಾಸಕ ಬಿ ಜೆಡ್ ಜಮೀರ್ ಅಹ್ಮದ್ ಖಾನ್, ತಮಗೆ ಸಹಕರಿಸಿದ ಕ್ಷೇತ್ರದ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
