ಅಪರ ಜಿಲ್ಲಾಧಿಕಾರಿಯಾಗಿ ಚನ್ನಬಸಪ್ಪ.ಕೆ ಅಧಿಕಾರ ಸ್ವೀಕಾರ

ತುಮಕೂರು:

      ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ಚನ್ನಬಸಪ್ಪ ಕೆ. ಅವರು ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.
2008ನೇ ಬ್ಯಾಚ್‍ನ ಕೆಎಎಸ್ ಅಧಿಕಾರಿಯಾಗಿರುವ ಚೆನ್ನಬಸಪ್ಪ ಕೆ. ಇವರಿಗೆ ಹಾವೇರಿ ಉಪವಿಭಾಗ, ಚಿಕ್ಕಮಂಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಗಳಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಡಿಸಿ (ಆಡಳಿತ), ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿರುವ ಅನುಭವವಿದೆ.

      ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಮಳವಳ್ಳಿ ಗ್ರಾಮದವರು . ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿದ್ದ ಚನ್ನಬಸಪ್ಪ ಕೆ. ಅವರನ್ನು ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿ. ಅನಿತಾ ಅವರ ಜಾಗಕ್ಕೆ ಕಳೆದ ಸೆಪ್ಟೆಂಬರ್ 15ರಂದು ಸರ್ಕಾರ ವರ್ಗಾಯಿಸಿತ್ತು.

                   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link