ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡು ಮೂರು ದಿನಗಳವರೆಗೆ ದಕ್ಷಿಣ ಭಾರತದಲ್ಲಿ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.
ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ದೇಶದ ಮಧ್ಯ ಭಾಗಗಳಲ್ಲಿ ಕಡಿಮೆ ಮಳೆಯ ಚಟುವಟಿಕೆಯು ಆಗಸ್ಟ್ 4 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ ಮತ್ತು ನಂತರ ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.
