ಬೆಂಗಳೂರು: 
ಸೋಮವಾರ ಪ್ರಕಟಗೊಂಡ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಎರಡನೆ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರದಲ್ಲೇ ಆತ್ಮಾವಲೋಕನ ಸಭೆ ನಡೆಸಲು ಉದ್ದೇಶಿಸಿದ್ದು, ಈ ಫಲಿತಾಂಶದ ಬಗ್ಗೆ ಸ್ಥಳೀಯ ಮುಂದೆ ತೆಗೆದುಕೊಳ್ಳಬೇಕಾದ ನಡೆಗಳ ಬಗ್ಗೆ ನಾಯಕರಿಂದ ಸಲಹೆ ಮತ್ತು ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ತೀವ್ರ ಸೆಣಸಾಟ ನಡೆಸಿದ್ದ ಬಿಜೆಪಿ ಅಂತಿಮವಾಗಿ ಎರಡನೇ ಸ್ಥಾನ ಪಡೆದಿದ್ದು. ಕಾಂಗ್ರೆಸ್ಗಿಂತಲೂ ಹೆಚ್ಚಿನ ಸಾಧನೆ ಮಾಡುವ ಲಕ್ಷ್ಯ ಹೊಂದಿದ್ದ ಪಕ್ಷದ ಅಧ್ಯಕ್ಷರೂ ಆದ ಯಡಿಯೂರಪ್ಪ ಅವರು, ಪಕ್ಷ ಎರಡನೇ ಸ್ಥಾನಕ್ಕೆ ಕುಸಿದ ಬಗ್ಗೆ ಕಾರಣ ಹುಡುಕುತ್ತಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಶಾಸಕರು, ಮಾಜಿ ಶಾಸಕರ ಮೌಲ್ಯಮಾಪನ ಮಾಡಲು ನಿರ್ಧರಿಸಿದ್ದಾರೆ.
ಪಕ್ಷ ಎಷ್ಟು ವಾರ್ಡ್ಗಳಲ್ಲಿ ಸ್ಪರ್ಧೆ ಮಾಡಿತ್ತು? ಎಷ್ಟು ವಾರ್ಡ್ಗಳಲ್ಲಿ ಗೆಲುವು ಸಾಧಿಸಿದೆ? ಎಷ್ಟು ವಾರ್ಡ್ಗಳಲ್ಲಿ ಸೋತಿದೆ? ಮತ ಗಳಿಕೆ ಪ್ರಮಾಣದ ಬಗ್ಗೆ ನಾಯಕರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಹೊರಬಿದ್ದ ಕೂಡಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ ಅವರು, “ಜೆಡಿಎಸ್-ಕಾಂಗ್ರೆಸ್ ಹಣಬಲದ ಮುಂದೆ ನಾವು ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗಿಲ್ಲ,” ಎಂದು ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








