!['ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ' - ಸಚಿವ ನಾಗೇಶ್](https://assets-news-bcdn.dailyhunt.in/cmd/resize/638x450_90/fetchdata16/images/0d/0c/59/0d0c599f8b7efb016e666b6525bd145bbc651719ad0e6b9512cd105ddc5109cb.webp)
ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.
ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್ಎಸ್ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.
ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/01/Capture-250.gif)