ಈ ವರ್ಷ ಶಾಲೆ ಆರಂಭ ಇಲ್ಲ , ಸರ್ಕಾರದಿಂದ ಮಹತ್ತರ ನಿರ್ಧಾರ!!

ಬೆಂಗಳೂರು :

     ಕೊರೊನಾ ಮಹಾಮಾರಿ ಹಿನ್ನಲೆಯಲ್ಲಿ ಕಳೆದ ಮಾರ್ಚ್‌ ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಶಾಲೆಗಳು ಈ ವರ್ಷದ ಅಂತ್ಯದವರೆಗೂ ತೆರೆಯುವುದಿಲ್ಲ.

    ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಸಿಎಂ ನೇತೃತ್ವದಲ್ಲಿ ಶಿಕ್ಷಣ ಸಚಿವರು, ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಲಾಯ್ತು. ಆರೋಗ್ಯ ಇಲಾಖೆ ಮತ್ತು ತಜ್ಞರ ಸಲಹೆ ಮೇರೆಗೆ ಡಿಸೆಂಬರ್‌ʼನಲ್ಲಿ ಶಾಲೆ ಪ್ರಾರಂಭಿಸಲ್ಲ. ಡಿಸೆಂಬರ್‌ ಕೊನೆಯಲ್ಲಿ ಮತ್ತೊಮ್ಮೆ ಚರ್ಚೆ ನಡೆಸಿ ಶಾಲೆ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

     ಡಿಸೆಂಬರ್‌ ತಿಂಗಳಿನಲ್ಲಿ ಚಳಿ ಹೆಚ್ಚಿರುವುದರಿಂದ ಶ್ವಾಸಕೋಶದ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ವೆ. ಇನ್ನೂ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗುವ ಸಧ್ಯತೆ ಇದೆ. ಹಾಗಾಗಿ ಡಿಸೆಂಬರ್‌ ತಿಂಗಳಲ್ಲಿ ಶಾಲೆ ತೆರೆಯುವುದು ಬೇಡ ಎಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ಸಲ್ಲಿಸಿದ್ದರು.

     ಇನ್ನೂ ದೆಹಲಿ, ಹರಿಯಾಣ,ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಮಿತಿ ಮೀರಿ ಹರಡುತ್ತಿದೆ. ಈ ರೀತಿಯ ರಿಸ್ಕ್‌ ರಾಜ್ಯದಲ್ಲಿ ತೆಗೆದುಕೊಳ್ಳುವುದು ಬೇಡ ಎಂದಿರುವ ತಜ್ಞರು, ಈ ವರ್ಷ ಮುಗಿಯುವವರೆಗೆ ಕಾದು ನೋಡಬಹುದು ಎಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap