ತುರುವೇಕೆರೆ:
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಚುನಾವಣಾ ಪ್ರಚಾರ ಮಾಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಏ 12 ರ ಸಂಜೆ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದ್ದಾರೆ.
ಪಟ್ಟಣದ ತಮ್ಮ ಸ್ವಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಿಲ್ಲೆಯಿಂದ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ದೇವೇಗೌಡರ ಪರವಾಗಿ ಮತಯಾಚನೆಗೆ ಕುಮಾರಸ್ವಾಮಿ ಆಗಮಿಸುವ ಸಭೆಗೆ ಸುಮಾರು 30 ರಿಂದ 35 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳನ್ನು ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆಯ ಮೂಲಕ ಕರತರಲಾಗುವುದು. ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ನ ಮುಖಂಡರು ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಯಾವುದೇ ಭಿನ್ನಾಭಿಪ್ರಾಯವಿಲ್ಲ: ತಾಲೂಕಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಮತಯಾಚನೆ ಮಾಡುವ ಮೂಲಕ ತಾವೆಲ್ಲರೂ ಒಗ್ಗಾಟ್ಟಾಗಿದ್ದು ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ ಒಟ್ಟಿಗೆ ಕೆಲಸ ಮಾಡುತ್ತಿರುವುದು ದೇವೇಗೌಡರ ಗೆಲುವಿಗೆ ಶ್ರಮಿಸುತ್ತಿದ್ದೇವೆ ಎಂದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಈಗಾಗಲೇ ಕ್ಷೇತ್ರದ ಸಿಎಸ್ ಪುರ, ದಬ್ಬೇಘಟ್ಟ, ದಂಡಿನಶಿವರ ಭಾಗಗಳಲ್ಲಿ ಚುನಾವಣಾ ಪ್ರಚಾರ ಮಾಡಲಾಗಿದೆ. ಇನ್ನು ಉಳಿದ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಮುಖಂಡರು ಒಟ್ಟಿಗೆ ತೆರಳಿ ಮತಯಾಚನೆ ಮಾಡಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಚೌದ್ರಿ ಟಿ ರಂಗಪ್ಪ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಹೆಚ್.ಕೆ.ನಾಗೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಸ್ವಾಮಿ, ಮಾಜಿ ಜಿ.ಪಂ.ಸದಸ್ಯ ಎ.ಬಿ.ಜಗದೀಶ್, ಪಟ್ಟಣ ಪಂಚಾಯ್ತಿ ಸದಸ್ಯ ವಿಜಯೇಂದ್ರಕುಮಾರ್, ಮುಖಂಡರಾದ ನಂಜುಂಡಪ್ಪ, ಕಮಲಾಸ್ವರ್ಣಕುಮಾರ್, ಜೋಗಿಪಾಳ್ಯಶಿವರಾಜು, ಕುಶಾಲ್ಕುಮಾರ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
