ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ : ಹ್ಯಾಟ್ರಿಕ್‌ ಹೀರೋ ಹೇಳಿದ್ದಾದರೂ ಏನು….?

ಬೆಂಗಳೂರು:

    ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹಿರಿಯ ನಟ ಕಮಲ್‌ ಹಾಸನ್‌ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅದರಲ್ಲೂ ಕನ್ನಡದ ನಟ ಶಿವರಾಜ್‌ ಕುಮಾರ್‌ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲೇ ಕಮಲ್‌ ಹಾಸನ್‌ ಈ ಹೇಳಿದ್ದರು. ಹೀಗಿದ್ದರೂ ಶಿವಣ್ಣ ಏನೂ ಹೇಳದೇ ಸುಮ್ಮನೆ ಕುಳಿತಿದ್ದರು ಎಂಬುದು ಹಲವರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

   ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್ ಅವರು, ಕಮಲ್ ಹಾಸನ್ ಕೂಡ ಕನ್ನಡಕ್ಕೆ ಗೌರವ ಕೊಡುತ್ತಾರೆ. ನಿನ್ನೆ ಬಂದಾಗಲೂ ಅಷ್ಟೇ ಚೆನ್ನಾಗಿ ಮಾತನಾಡಿದ್ದಾರೆ. ನಾನು ಅವರ ಬಹಳ ದೊಡ್ಡ ಅಭಿಮಾನಿ. ನಮ್ಮನ್ನು ಗೌರವದಿಂದ ಸಮಾರಂಭಕ್ಕೆ ಕರೆದಿದ್ದರು. ಅದೇ ಗೌರವದಿಂದ ನಾನೂ ಸಹ ಹೋಗಿದ್ದೆ . ವೇದಿಕೆ ಮೇಲೆ ಏನು ತಪ್ಪಾಯಿತು ಎಂಬುದು ನನಗೆ ಗೊತ್ತಾಗಲಿಲ್ಲ. ಇಲ್ಲಿ ಬಂದು ನೋಡಿದಾಗ ವಿವಾದ ಆಗಿತ್ತು ಎಂದರು.

   ನಾವು ಅವರನ್ನು ನೋಡಿ ಬೆಳೆದವರು, ಕಮಲ್ ಅವರಿಗೆ ನಾನು ಕೊಡುವ ಸ್ಥಾನ ಬೇರೆ. ನಾನು ಅವರಿಂದ ಇನ್ಸ್ಪೈರ್ ಆಗಿದ್ದೀನಿ. ಕಂಡಿತ ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕೋ ಅವರು ಕೊಡ್ತಾರೆ ಎಂದು ತಿಳಿಸಿದ್ದಾರೆ. ತಮ್ಮ ‘ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ “ಕನ್ನಡ ತಮಿಳಿನಿಂದ ಹುಟ್ಟಿತು” ಎಂದು ಕಮಲ್‌ ಹಾಸನ್‌ ಹೇಳಿಕೆ ನೀಡಿರುವುದು ಕನ್ನಡಿಗರನ್ನು ಕೆರಳಿಸಿದೆ. ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್‌ ಕೂಡ ಹಾಜರಿದ್ದ ಈ ಕಾರ್ಯಕ್ರಮದಲ್ಲಿ ಇದು ನನ್ನ ಕುಟುಂಬ. ಅದಕ್ಕಾಗಿಯೇ ಅವರು ಶಿವರಾಜಕುಮಾರ್ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಹುಟ್ಟಿದೆ, ಆದ್ದರಿಂದ ನೀವು ಕೂಡ ಸೇರಿದ್ದೀರಿ” ಎಂದು ಹಾಸನ್ ಹೇಳಿದ್ದರು.

Recent Articles

spot_img

Related Stories

Share via
Copy link