ಬೆಂಗಳೂರು:
ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.
ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ – 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೇರಿ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್ಐಆರ್ ದಾಖಲಾಗಿತ್ತು.
ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆಯನ್ನೂ ಹಾಕಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/uppi.jpg)