ಬೆಂಗಳೂರು
ಉಪಗ್ರಹ ಚಿತ್ರ ನೋಡಿ ಕಸ್ತೂರಿ ರಂಗನ್ ವರದಿ ಸಿದ್ಧಪಡಿಸಿದ್ದಾರೆ ಎನ್ನುವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಬಿಜೆಪಿ ಮುಖಂಡರು, ತಮ್ಮದೇ ಸರ್ಕಾರ ಇದ್ದಾಗ ಈ ವರದಿ ಕೈಬಿಡುವಂತೆ ಏಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಎಲ್ಲ ಬಾಧ್ಯಸ್ಥರ (ಸ್ಟೇಕ್ ಹೋಲ್ಡರ್ಸ್) ಜೊತೆ ಚರ್ಚಿಸಿ ವರದಿ ಸಲ್ಲಿಸಲು ರೀತ್ಯ ನಿವೃತ್ತ ಐ.ಎಫ್.ಎಸ್. ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಒಂದು ಪರಿಶೀಲನಾ ಸಮಿತಿ ರಚಿಸಿದೆ. ಈ ಸಮಿತಿ ಅವಧಿ ಮುಗಿದಿದ್ದು, ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.
ಸಮಿತಿ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ ಜೊತೆ ಮಾತನಾಡುತ್ತದೆ ಎಂದು ಆಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಈ ಒಂದು ವರ್ಷದ ಅವಧಿಯಲ್ಲಿ ಸಂಜಯ್ ಕುಮಾರ್ ಸಮಿತಿ ಪಶ್ಚಿಮಘಟ್ಟದ ಯಾವ ಪ್ರದೇಶಕ್ಕೆ ಭೇಟಿ ನೀಡಿ ಯಾವ ಬಾಧ್ಯಸ್ಥರನ್ನು ಭೇಟಿಮಾಡಿದೆ ಎಂಬ ಬಗ್ಗೆ ಮರಗಿಡಗಳ ಕಾಳಜಿ ಇರುವ ಆರಗ ಜ್ಞಾನೇಂದ್ರ ಉತ್ತರಿಸಲಿ ಎಂದು ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಇತ್ತೀಚೆಗೆ ಸಂಜಯ್ ಕುಮಾರ್ ನೇತೃತ್ವದ ಸಮಿತಿ ಸದಸ್ಯರು ತಮ್ಮನ್ನು ಭೇಟಿ ಮಾಡಿದ್ದರು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/eshwar-khandre.jpg)