ಕಾಂಗ್ರೆಸ್‌ ನಡುವೆ ಟ್ವೀಟ್‌ ಸಮರ ಆರಂಭ…!

ಬೆಂಗಳೂರು:

      ಇಷ್ಟುದಿನ ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮಾಡಲು ಆಗಲ್ಲ ಅಂತಿದ್ದ ಬಿಜೆಪಿ ನಾಯಕರು, ಇದೀಗ ಗ್ಯಾರಂಟಿ ಘೋಷಣೆ ಆಗುತ್ತಿದ್ದಂತೆ ಅದರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಿನ್ನೆಯಿಂದ ಶುರುವಾದ ಈ ಯುದ್ಧಕ್ಕೆ ಇದೀಗ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ ಅವರ ಹೆಸರು ಕೂಡ ಎಂಟ್ರಿಯಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ನಿನ್ನೆ ತೀರ್ಮಾನ ಕೈಗೊಂಡು 5 ಗ್ಯಾರಂಟಿ ಜಾರಿಗೆ ಆದೇಶ ಹೊರಬಿದ್ದಿತ್ತು.

     ನಿನ್ನೆ ಬಿಜೆಪಿ ನಾಯಕರ ಕುರಿತು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಬಿಜೆಪಿ ತಿರುಗೇಟು ನೀಡಿ, ‘ಖಂಡಿತಾ ಸ್ವಾಮಿ…. ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhi ಯವರಿಗೂ  ಹಾಗೂ ಡಾ|| ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ.’ ಎಂದು ಟ್ವೀಟ್ ಪೋಸ್ಟ್ ಮಾಡಿತ್ತು.

    ಇದೀಗ ಇದೇ ಟ್ವೀಟ್‌ಗೆ ಕಾಂಗ್ರೆಸ್ ಕೂಡ ರೀಪ್ಲೇ ನೀಡಿದೆ. ಆ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಭರ್ಜರಿಯಾಗಿ ನಡೆಯುತ್ತಿದೆ. 

    ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ಸಿದ್ದರಾಮಯ್ಯ ಮಾಡಿದ ಕಾಮಿಡಿಗೆ ಬಿದ್ದು ಬಿದ್ದು ನಕ್ಕ ಪತ್ರಕರ್ತರು ‘ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ’ ಅಷ್ಟಕ್ಕೂ ಬಿಜೆಪಿ ಮಾಡಿದ್ದ ಟ್ವೀಟ್‌ಗೆ ಸವಾಲು ಹಾಕಿರುವ ಕಾಂಗ್ರೆಸ್ ‘ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ.

    @smritiirani ಅವರ ಪದವಿ ಹುಡುಕಿ ತನ್ನಿ, ಹಾಗೆಯೇ ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ)’ ಎಂದು ರಣವೀಳ್ಯ ನೀಡಿದೆ. Basavaraj Bommai: ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ : ಬಸವರಾಜ ಬೊಮ್ಮಾಯಿ ‘ನಾವು ನುಡಿದಂತೆ ನಡೆಯುವವರು’ ಹಾಗೇ ಮತ್ತೊಂದ್ಕಡೆ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ನಿನ್ನೆ ಇನ್ನೊಂದು ಟ್ವೀಟ್ ಮಾಡಿ, ‘ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.

     ಐದೂ ಗ್ಯಾರಂಟಿ ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ,’ ಎನ್ನುವ ಮೂಲಕ ಬಿಜೆಪಿ & ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿತ್ತು. ನಿನ್ನೆ ಶುರುವಾಗಿದ್ದ ಗ್ಯಾರಂಟಿಗಳ ವಾರ್ ಇಂದು ಕೂಡ ತಣ್ಣಗಾಗಿಲ್ಲ. ಜನ ಮಾತ್ರ ಇಬ್ಬರ ಜಗಳದಲ್ಲಿ ಭರ್ಜರಿ ಎಂಟರ್‌ಟೈನ್‌ಮೆಂಟ್ ಪಡೆಯುತ್ತಿರೋದು ಸುಳ್ಳಲ್ಲ. ಮತದಾರರಿಗೆ, ಕಾರ್ಯಕರ್ತರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ- ಶಾಸಕ ಹೆಚ್.ಡಿ.ತಮ್ಮಯ್ಯ ಎಚ್ಚರಿಕೆ ಹೀಗೆ 5 ಗ್ಯಾರಂಟಿ ವಿಚಾರದ ಬಗ್ಗೆ ಚರ್ಚೆ ನಡೆಯುವಾಗಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ. ‘ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಅರ್ಥಿಕ ಪರಿಸ್ಥಿತಿಯ ಬಗ್ಗೆ ವಿಸ್ತೃತವಾಗಿ ವಿವರಿಸಬೇಕಾಗಿರುವ ಅನಿವಾರ್ಯತೆಯಿದೆ ಎಂದು ತಿಳಿಸಿದ್ದರು.

     ಈ ಕುರಿತಂತೆ ಸಿದ್ದರಾಮಯ್ಯ ಅವರು ಇಲ್ಲಿಯವರೆಗೂ ತುಟಿ ಬಿಚ್ಚಿಲ್ಲ. ಇಂದು ಆ ಬಗ್ಗೆ ಪತ್ರಕರ್ತರೊಬ್ಬರ ಪ್ರಶ್ನೆಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಶ್ರೀ ಕೆ.ಎಚ್.ಮುನಿಯಪ್ಪ ಅವರು ಉತ್ತರಿಸದೇ ‘No Comments’ ಎಂದಿದ್ದಾರೆ. ಹಾಗಾದರೆ ಕಾಂಗ್ರೆಸ್‌ ಗ್ಯಾರಂಟಿಗಳ ಪುಂಗಿಯನ್ನು ಪೂರೈಸಲು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ವಿವರಿಸಲು, ಕ್ರೂಢೀಕರಣದ ಬಗ್ಗೆ ಉತ್ತರಿಸುವವರು ಯಾರು?’ ಎಂದು ಪ್ರಶ್ನೆ ಮಾಡಿದೆ ಬಿಜೆಪಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link