ಉಡುಪಿ:
ನನ್ನ ಸರ್ಕಾರ ಸುಭದ್ರವಾಗಿದ್ದು, ಕಾಂಗ್ರೆಸ್ ಪಕ್ಷದವರೆಲ್ಲರೂ ನನ್ನ ಜೊತೆ ಸುಮಧುರ ಬಾಂಧವ್ಯವನ್ನು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಳೆದೆರೆಡು ದಿನಗಳಿಂದ ಬೆಳಗಾವಿ ಪಿ.ಎಲ್.ಡಿ ಬ್ಯಾಂಕ್ ಚುನಾವಣೆ ವಿಚಾರ ಹಲವು ಚರ್ಚೆಗಳಿಗೆ ಕಾರಣವಾಗಿದ್ದು, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಪಿ.ಎಲ್.ಡಿ ಬ್ಯಾಂಕ್ ವಿವಾದ ಚರ್ಚೆಯಾಗಿದ್ದು ಮಾಧ್ಯಮಗಳಲ್ಲಿ ಮಾತ್ರ ಎಂದು ತಿಳಿಸಿದ್ದಾರೆ.
ಎಲ್ಲವೂ ಸಾಮರಸ್ಯದಿಂದ ನಡೆಯುತ್ತಿದ್ದು, ನನ್ನ ಸರ್ಕಾರ ಸುಭದ್ರವಾಗಿದೆ. ಚುನಾವಣೆಯಲ್ಲಿ ಜಯವಾಗಿರುವುದು ಯಾವುದೇ ಬಣಕ್ಕೆ ಅಲ್ಲ. ಕಾಂಗ್ರೆಸ್ ಪಕ್ಷಕ್ಕೆ. ನನ್ನ ಜೊತೆ ಎಲ್ಲರೂ ಸುಮಧುರ ಬಾಂಧವ್ಯದಿಂದ ಇದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/07/karnataka-govt-formation-759.jpg)