ಬೆಂಗಳೂರು:
ಸಿದ್ದರಾಮಯ್ಯ ಒನ್ ಮತ್ತೆ ಸಿದ್ದರಾಮಯ್ಯ ಟುನಲ್ಲಿ ಬಹಳ ವ್ಯತ್ಯಾಸ ಇದ್ದು, ಮೊದಲಿದ್ದ ಸಿದ್ದರಾಮಯ್ಯ ಬೇರೆ, ಇವಾಗಿನ ಸಿದ್ದರಾಮಯ್ಯ ಬೇರೆ ಎಂದರು.
ಸಿಎಂ ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದು, ಮೊದಲಿನ ಹಾಗೆ ಸಿಡಿದೇಳುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರೋದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳ್ತಿಲ್ಲ. ಇವಾಗ ವರಿಷ್ಠರ ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಇಡೀ ಕ್ಯಾಬಿನೆಟ್ ಹೋಗಿ ಪಕ್ಷದ ಕಚೇರಿಯಲ್ಲಿ ಸಭೆ ಮಾಡಿದ್ದು ಇತಿಹಾಸದಲ್ಲೇ ನಡೆದಿಲ್ಲ. ಸುರ್ಜೇವಾಲ ಅವರು ಇಲ್ಲಿಗೆ ಬಂದು ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್ ಗೆ ಮತ ಕೊಟ್ಟಿದ್ದಾರೆ ಆದರೆ ಇವರು ರಾಜ್ಯದ ಜನತೆಗೆ ಅವಮಾನ ಮಾಡ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಮೊದಲಿಂದಲೂ ಎಲ್ಲವೂ ಸರಿಯಲ್ಲ ಎಂಬುದು ಸ್ಪಷ್ಟವಾಗ್ತಿದೆ. ವರ್ಗಾವಣೆ ದಂಧೆ ಹಗಲು ದರೋಡೆ ಆಗಿದೆ. ಸಚಿವರು ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ. ಭ್ರಷ್ಟಾಚಾರ ಸ್ಪಷ್ಟ ವಾಗಿ ಕಾಣಿಸ್ತಿದೆ. ಇದು ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಅಷ್ಟೇ ಅಲ್ಲ, ಸರ್ಕಾರದಲ್ಲಿ ಹೈಕಮಾಂಡ್ ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/bommai.jpg)