ಕಾಂಗ್ರೆಸ್ ಪಕ್ಷ ಪಟ್ಟಣ ಪಂಚಾಯ್ತಿಯಲ್ಲಿ ಅಧಿಕಾರದ ಗದ್ದಿಗೆ ಹಿಡಿಯಲು ಮತದಾರರು ಆಶೀರ್ವಾದ ಮಾಡಬೇಕು- ಹೆಚ್.ಪಿ.ರಾಜೇಶ್

 ಜಗಳೂರು :

      ಹಿಂದಿನ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಪಟ್ಟಣ ಪಂಚಾಯ್ತಿಯಲ್ಲಿ ಅಧಿಕಾರದ ಗದ್ದಿಗೆ ಹಿಡಿಯಲು ಮತದಾರರು ಆಶೀರ್ವಾದ ಮಾಡಬೇಕು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಹೇಳಿದರು.

      ಪಟ್ಟಣದ ಪಟ್ಟಣ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ 16 ವಾರ್ಡ್‍ಗಳ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಇಲ್ಲಿನ ಈಶ್ವರದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

      ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಟ್ಟಣದ ಅಭಿವೃದ್ದಿಗೆ ಸಾಕಷ್ಟು ಅನುದಾನ ಒದಗಿಸಿ ಪ್ರತಿ ವಾರ್ಡ್‍ನಲ್ಲೂ ಸಿಸಿ ರಸ್ತೆ, ಬಾಕ್ಸ್ ಚರಂಡಿ, ಬೀದಿ ದೀಪ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸಲಾಗಿದೆ. ನಮ್ಮ ಅವಧಿಯಲ್ಲಾದ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ 18 ವಾರ್ಡ್‍ಗಳ ಪೈಕಿ 16 ವಾರ್ಡ್‍ಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸುವ ಮೂಲಕ ಮತ್ತೊಮ್ಮೆ ಪಟ್ಟಣ ಪಂಚಾಯ್ತಿಯನ್ನು ಕೈ ವಶ ಮಾಡಿಕೊಳ್ಳಲು ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

      ಪ್ರಚಾರ ಸಮಿತಿ ಅಧ್ಯಕ್ಷ ಕಲ್ಲೇಶ್‍ರಾಜ್‍ಪಟೇಲ್ ಮಾತನಾಡಿ ಪಟ್ಟಣ ಪಂಚಾಯ್ತಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಈಗಾಗಲೇ ವಿವಿಧೆಡೆ ಪ್ರಚಾರ ಕಾರ್ಯ ಶುರುವಾಗಿದೆ. ಆದರೆ ಅಧಿಕೃತವಾಗಿ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಅವರ ನೇತೃತ್ವದಲ್ಲಿ ಎಲ್ಲಾ ಅಭ್ಯರ್ಥಿಗಳ ಗೆಲುವಿಗೆ ಶುಭವಾಗಲೀ ಎಂದರು.

      ಕೆಪಿಸಿಸಿ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ಪಾಲಯ್ಯ ಮಾತನಾಡಿ ಕಳೆದ ಭಾರಿ 15 ವಾರ್ಡ್‍ಗಳಲ್ಲಿ 11 ವಾರ್ಡ್‍ಗಳನ್ನು ಗೆಲ್ಲುವ ಮೂಲಕ 5 ವರ್ಷಗಳ ಕಾಲ ಸದೃಢ ಆಡಳಿತ ನೀಡಿ ಉತ್ತಮ ಕೆಲಸ ನಿರ್ವಹಿಸಿದ ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿಯೂ ಸಹ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದರು.

      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಕೆಪಿಸಿಸಿ ಸದಸ್ಯ ಸತೀಶ್‍ರೆಡ್ಡಿ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯೆ ನಾಗರತ್ನಮ್ಮ, ಮೊಬೈಲ್ ಮಂಜಣ್ಣ, ಮುಖಂಡರಾದ ಗುರುಸಿದ್ದಪ್ಪ, ನಾಗರಾಜ್, ವೇಣುಗೋಪಾಲರೆಡ್ಡಿ, ಇಕ್ಬಾಲ್‍ಅಹಮದ್, ಎನ್.ಎಂ.ಹಾಲಸ್ವಾಮಿ, ಪ್ರಭು ಸೇರಿದಂತೆ 16 ವಾರ್ಡ್‍ನ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link