ಚೆನ್ನೈ :
AIADMK ಸಂಸದ ಎಸ್ ರಾಜೇಂದ್ರನ್ ಕಾರು ಅಪಘಾತದಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
62 ವರ್ಷ ಪ್ರಾಯದ ರಾಜೇಂದ್ರನ್ ಅವರು ಪಿ.ಎಂ.ಕೆ. ಪಕ್ಷದ ರಾಮ್ ದಾಸ್ ಅವರು ತೈಲಪುರಂನಲ್ಲಿ ಏರ್ಪಡಿಸಿದ್ದ ಔತಣಕೂಟವೊಂದರಲ್ಲಿ ಭಾಗವಹಿಸಿ ತಮ್ಮ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ವಿಲಿಪುರಮ್ ಜಿಲ್ಲೆಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಇನ್ನೂ ಮೂವರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾರೆ.
Tamil Nadu: All India Anna Dravida Munnetra Kazhagam (AIADMK) leader and Member of Parliament S Rajendran died in a car accident near Tindivanam, in Viluppuram district, early morning today. Police investigation is underway. (File pic) pic.twitter.com/IeGe9pbuHf
— ANI (@ANI) February 23, 2019
ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ನಿಟ್ಟಿನಲ್ಲಿ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡು ರಾಜೇಂದ್ರನ್ ಕಾರ್ಯನಿರ್ವಹಿಸುತ್ತಿದ್ದರು.
ಸದ್ಯ ಈ ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
![](https://prajapragathi.com/wp-content/uploads/2019/02/s-rajendran_710x400xt.jpg)