ಶ್ರೀನಗರ
ಹಿರಿಯ ಪಿಡಿಪಿ ನಾಯಕರೊಂದಿಗೆ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಅಲ್ಲದೆ ನನ್ನ ಪಕ್ಷದ ಹಲವಾರು ಜನರನ್ನು ಪೊಲೀಸ್ ಠಾಣೆಗಳಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ. ಸುಪ್ರೀಂ ಕೋರ್ಟ್ಗೆ ಇಲ್ಲಿನ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಮಾಹಿತಿ ನೀಡಿ ತಮ್ಮ ಮೇಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಒಂದು ಕಡೆ ಶ್ರೀನಗರದಾದ್ಯಂತ 370 ನೇ ವಿಧಿಯನ್ನು ರದ್ದುಗೊಳಿಸಿದ ನಡೆಯನ್ನು ಆಚರಿಸಲು ಕಾಶ್ಮೀರಿಗಳಿಗೆ ಕರೆ ನೀಡುವ ಬೃಹತ್ ಹೋರ್ಡಿಂಗ್ಗಳನ್ನು ಹಾಕಲಾಗಿದೆ. ಆದರೆ ಜನರ ನಿಜವಾದ ಭಾವನೆಯನ್ನು ಉಸಿರುಗಟ್ಟಿಸಲು ವಿವೇಚನಾರಹಿತ ಶಕ್ತಿಯನ್ನು ಬಳಸಲಾಗುತ್ತಿದೆ. ಆರ್ಟಿಕಲ್ 370 ವಿಚಾರಣೆಗೆ ಬಂದಿರುವ ಸಮಯದಲ್ಲಿ ಸುಪ್ರೀಂ ಕೋರ್ಟ್ ಈ ಬೆಳವಣಿಗೆಗಳ ಬಗ್ಗೆ ನಿಖರ ಮಾಹಿತಿ ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
I’ve been put under house arrest along with other senior PDP leaders today. This comes after a midnight crackdown where scores of my party men are illegally detained in police stations. GOIs false claims about normalcy to the SC stands exposed by theirs actions driven by… pic.twitter.com/gqp25Ku2CJ
— Mehbooba Mufti (@MehboobaMufti) August 5, 2023
ದೆಹಲಿ ಹೈಕಮಾಂಡ್ ನಿಂದ ನಡೀತಿದೆ ಆಡಳಿತ ಅಂದ್ರು ಬೊಮ್ಮಾಯಿ ಕಳೆದ 4 ವರ್ಷಗಳ ಹಿಂದೆ ಅಂದರೆ ಆಗಸ್ಟ್ 5, 2019 ರಂದು ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಹಿಂತೆಗೆದುಕೊಂಡಿತ್ತು. ಅಲ್ಲದೆ ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಆರ್ಟಿಕಲ್ 370 ರದ್ದತಿಯ ನಾಲ್ಕನೇ ವಾರ್ಷಿಕೋತ್ಸವದಂದು ಶಾಂತಿಯುತ ಕಾರ್ಯಕ್ರಮವನ್ನು ಆಯೋಜಿಸಲು ಪಕ್ಷಕ್ಕೆ ಅನುಮತಿ ನಿರಾಕರಿಸಿದ ನಂತರ ಪಕ್ಷದ ನಾಯಕರ ವಿರುದ್ಧ ಮಧ್ಯರಾತ್ರಿಯಲ್ಲಿ ಗೃಹ ಬಂಧನ ವಿಧಿಸಲಾಯಿತು. ಮಾಜಿ ಸಚಿವರಾದ ಅಬ್ದುಲ್ ರೆಹಮಾನ್ ವೀರಿ, ನಯೀಮ್ ಅಖ್ತರ್ ಮತ್ತು ಆಸಿಯಾ ನಕಾಶ್, ಪಿಡಿಪಿ ಪ್ರಧಾನ ಕಾರ್ಯದರ್ಶಿ ಗುಲಾಮ್ ನಹಿ ಲೋನ್ ಹಂಜುರಾ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮೆಹಬೂಬ್ ಬೇಗ್ ಮತ್ತು ಜಿಲ್ಲಾಧ್ಯಕ್ಷ ಬುದ್ಗಾಮ್ ಮೊಹಮ್ಮದ್ ಯಾಸಿನ್ ಭಟ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಕ್ಷದ ವಕ್ತಾರರು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/ಮೆಹಬೂಬಾ-ಮುಫ್ತಿ.jpg)