ಕೇರಳ : ಮತ್ತೆ ವಂದೇ ಭಾರತ್ ಗೆ ಕಲ್ಲನೇಟು…!

ಕಾಸರಗೋಡು:

         ಉತ್ತರ ಕಣ್ಣೂರು ಜಿಲ್ಲೆಯಲ್ಲಿ ಎರಡು ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಮೂರು ದಿನಗಳ ನಂತರ ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೋಗುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರ ಪರಿಣಾಮ ಅದರ ಒಂದು ಕಿಟಕಿಗೆ ಹಾನಿಯಾಗಿದೆ. ವಟಕರ ಬಳಿ ಸಂಜೆ 4 ರಿಂದ 4.30 ರ ನಡುವೆ ಈ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಯಲ್ಲಿ ರೈಲಿನ ಸಿ-8 ಬೋಗಿಯ ಕಿಟಕಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಹೊರಗಿನಿಂದ ಗಾಜು ಒಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಿಟಕಿಯ ಗಾಜುಗಳು ತೀವ್ರ ರೀತಿಯಲ್ಲಿ ಹಾನಿಯಾಗಿರುವುದಾಗಿ ಟಿವಿ ಚಾನೆಲ್ ಗಳು ತೋರಿಸಿವೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap