ಜಮಖಂಡಿ ಲೋಕಸಭಾ ಅಭ್ಯರ್ಥಿ ನೇಮಕ : ಬಿಎಸ್‍ವೈ ನಿವಾಸದಲ್ಲಿ ಸಭೆ

 ಬೆಂಗಳೂರು:

      ಬಾಗಲಕೋಟೆ ಜಿಲ್ಲೆಯ ಜಮಖಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಲುವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದೆ.

      ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಿಎಸ್‍ವೈ ನಿವಾಸದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಜಮಖಂಡಿ ಕ್ಷೇತ್ರದ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಲಿದೆ. ಜಮಖಂಡಿಯಿಂದ ಶ್ರೀಕಾಂತ್ ಕುಲಕರ್ಣಿ ಅಖಾಡಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

      ಜಮಖಂಡಿಯಿಂದ ಶ್ರೀಕಾಂತ್ ಕುಲಕರ್ಣಿ ಕಣಕ್ಕಿಳಿದ್ರೆ ಬಿಜೆಪಿಗೆ ಅನುಕೂಲವಾಗಲಿದೆ. ಸಂಗಮೇಶ್​ ನಿರಾಣಿ ಅಭ್ಯರ್ಥಿಯಾದ್ರೆ ಗೆಲುವು ಕಷ್ಟ ಅಂತಾ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಶ್ರೀಕಾಂತ್ ಕುಲಕರ್ಣಿ ಪರ ಗೋವಿಂದ ಕಾರಜೋಳ ಬ್ಯಾಟ್​ ಮಾಡಿದ್ರೆ. ಸಂಗಮೇಶ್ ನಿರಾಣಿ ಪರ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link