ಶ್ರೀನಗರ:
ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ.
ಪುಲ್ವಾಮಾ ಉಗ್ರ ದಾಳಿ, ಭಾರತೀಯ ವಾಯುಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಂತರ ಕಳೆದ ಕೆಲವು ದಿನಗಳಿಂದ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಬೆನ್ನಲ್ಲೇ ಜಮ್ಮು ಬಸ್ ನಿಲ್ದಾಣದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ.
J&K: Blast at Jammu bus stand. Injured admitted to hospital. Area has been cordoned off by security personnel pic.twitter.com/utO7RX0GOp
— ANI (@ANI) March 7, 2019
ಬಸ್ನಿಲ್ದಾಣದಲ್ಲಿರುವ ಬಸ್ನಲ್ಲಿಯೇ ಉಗ್ರರು ಗ್ರೆನೇಡ್ ಸ್ಫೋಟ ಮಾಡುವ ಮೂಲಕ ಮತ್ತೆ ತಮ್ಮ ಅಟ್ಟಹಾಸವನ್ನು ಮೆರೆದಿದ್ದಾರೆ. ಸದ್ಯಕ್ಕೆ ಬಸ್ ಹೊರಗೆ ಇದ್ದ ಜನರಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಸ್ಸಿನಲ್ಲಿ ಎಷ್ಟು ಜನರು ಇದ್ದರು ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.
ಸದ್ಯಕ್ಕೆ ಸ್ಫೋಟದ ರಭಸಕ್ಕೆ ಬಸ್ ಸುಟ್ಟು ಹೋಗಿದೆ. ಕೆಲ ವರ್ಷದಿಂದ ಉಗ್ರರು ಜನರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ನಿಲ್ಲಿಸಿ ಸೈನಿಕರ ಮೇಲೆ ದಾಳಿ ಮಾಡುತ್ತಿದ್ದರು. ಆದರೆ ಈಗ ಮತ್ತೆ ಜನರ ಮೇಲೆ ದಾಳಿ ಆರಂಭಿಸಿದ್ದಾರೆ.
ಘಟನೆ ಸಂಭವಿಸುತ್ತಿದ್ದಂತೆ ಪೊಲೀಸರು ಸ್ಥಳವನ್ನು ಸುತ್ತುವರಿದು ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದು, ಮೊತ್ತರ್ವ ಉಗ್ರ ಪರಾರಿಯಾಗಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ