ಜಾಮಿಯಾ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ

ಶ್ರೀರಂಗಪಟ್ಟಣ:ಜಾಮಿಯಾ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ: ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಎಫ್​ಐಆರ್​             ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಎಫ್​ಐಆರ್​ 

      ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಅರಸೀಕೆರೆಯ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ, ಮಸೀದಿ ಮುಂಭಾಗದಲ್ಲೇ ನಿಂತು ವಿವಾದಿತ ಹೇಳಿಕೆ ಉಲ್ಲೇಖಿಸಿ ವಿಡಿಯೋ ಚಿತ್ರೀಕರಣ ನಡೆಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ.

 

ಇದೀಗ ಈ ವಿಡಿಯೋ ವೈರಲ್​ ಆಗಿದೆ. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್​ ಬೋರ್ಡ್​ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್​ ಠಾಣೆಗೆ ಮನವಿ ಮಾಡಿವೆ.

ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.

ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆಗೆ ಆಗಮಿಸಿದ್ದ ಋಷಿ ಕುಮಾರಸ್ವಾಮಿ, ವಾರಾಂತ್ಯದ ಕರ್ಫ್ಯೂ ನಡುವೆ ಈ ವಿವಾದಿತ ವಿಡಿಯೋ ಮಾಡಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap