ಡಿಕೆಶಿ ಆರೋಗ್ಯ ವಿಚಾರಿಸಿದ ಹೆಚ್ಡಿಕೆ

ಬೆಂಗಳೂರು:

      ಫುಡ್ ಪಾಯ್ಸನ್ ನಿಂದಾಗಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ರವರನ್ನು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

      ನಗರದ ಮಲ್ಲೇಶ್ವರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಗುರುವಾರ ಬೆಳಗ್ಗೆ ಸಿಎಂ ತೆರಳಿ ಅವರ ಆರೋಗ್ಯ ವಿಚಾರಿಸಿ ಕೆಲಕಾಲ ಮಾತುಕತೆ ನಡೆಸಿದರು. ಸಿಎಂಗೆ ಸಚಿವ ಬಂಡೆಪ್ಪ ಕಾಶಂಪುರ್​ ಸಾಥ್​ ನೀಡಿದರು.

      ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಅವರು ಮೂರು ದಿನ ಕಲಬುರಗಿ ಪ್ರವಾಸ ಮಾಡಿದ್ದರು. ಅಲ್ಲಿನ ಆಹಾರದಿಂದಾಗಿ ಫುಡ್​ ಪಾಯ್ಸನ್​ ಆಗಿದೆ. ಅವರ ಆರೋಗ್ಯದ ಜತೆಗೆ ಬಿಜೆಪಿ ರಾಜಕೀಯದ ಬಗ್ಗೆಯೂ ಮಾತುಕತೆ ನಡೆಸಿದೆ ಎಂದು ತಿಳಿಸಿದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ