ಡಿಕೆಶಿ ಸಚಿವರಾಗಿ ಬೆಳಗಾವಿಗೆ ಬರಲಿ, ಆದರೆ ರಾಜಕೀಯ ಹಸ್ತಕ್ಷೇಪ ಸಲ್ಲದು…?!

ಬೆಂಗಳೂರು: 

      ಡಿಕೆಶಿ ಸಚಿವರಾಗಿ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಆದರೆ ಅವರು ನಮ್ಮ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು. ಬೆಳಗಾವಿ ಸಮಸ್ಯೆ ಬಗೆಹರಿದಿದೆ ಎಂದು ಮಾಜಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ. 

      ಸೋಮವಾರ ತಮ್ಮ ಬೆಂಬಲಿಗ ಶಾಸಕರ ಜತೆ ಸಭೆ ನಡೆಸಿ, ಬಳಿಕ ಸಂಜೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ರಮೇಶ್ ಜಾರಕಿಹೊಳಿ ವಿವಿಧ ಬೇಡಿಕೆಗಳನ್ನು ಅವರ ಮುಂದಿರಿಸಿದ್ದರು.

       ಬೆಳಗಾವಿ ಜಿಲ್ಲೆಯ ಆಡಳಿತ, ಪಕ್ಷದ ಚಟುವಟಿಕೆ ಮತ್ತಿತರ ವಿಚಾರಗಳಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದ್ದ ಜಾರಕಿಹೊಳಿ ಸಹೋದರರು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದರು. ಈಗ ಆ ಸಮಸ್ಯೆ ಬಗೆಹರಿದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link