ಬೆಂಗಳೂರು
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಿಸಿರುವ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಕೇಸ್ ತ್ವರಿತ ವಿಲೇವಾರಿಗೆಂದು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಶಿವಕುಮಾರ್ ಪರ ವಕೀಲರು ಸಲ್ಲಿಸ್ಸಿದ್ದ ಮನವಿಯನ್ನು ತಿರಸ್ಕರಿಸಿದೆ ಇದರ ನಡುವೆ ನ್ಯಾಯಾಲಯ ಸಿಬಿಐ ಪರ ವಕೀಲರ ಮನವಿ ಮೇರೆಗೆ ಪ್ರಕರಣದ ವಿಚಾರಣೆಯನ್ನು ಒಂದು ವಾರ ಮುಂದೂಡಿದೆ.
ಸಿಬಿಐ ಪರ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೋರಿದರು. ಇದಕ್ಕೆ ಶಿವಕುಮಾರ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ . ಅಂತೆಯೇ, ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೊನೆಗೆ ನ್ಯಾಯಪೀಠ, ಸಿಬಿಐ ಪರ ವಕೀಲರ ಮನವಿಯಂತೆ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.
![](https://prajapragathi.com/wp-content/uploads/2022/04/198061-dk-919795-1606304554.jpg)