ತೆಲಂಗಾಣಕ್ಕೆ 15 ಕೋಟಿ ನೆರವು ನೀಡಿದ ಕೇಜ್ರಿವಾಲ್..!

ದೆಹಲಿ:

     ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ತೆಲಂಗಾಣ ಜನ ಜೀವನ ಈಗಾಗಲೇ ಕೊರೋನಾದಿಂದಾಗಿ ಆರ್ಥಿಕವಾಗಿ ತತ್ತರಿಸಿರುವ ತೆಲಂಗಾಣಕ್ಕೆ ಈ ನೆರೆ ಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ತೆಲಂಗಾಣ ರಾಜ್ಯದ ಬೆನ್ನಿಗೆ ನಿಂತಿರುವ ದೆಹಲಿ ಸರ್ಕಾರವು ಸಹಾಯ ಹಸ್ತ ಚಾಚಿದ್ದು, 15 ಕೋಟಿ ದೇಣಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಸ್ವತಃ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್​ ಮಾಡಿದ್ದಾರೆ.

    ಈ ಕುರಿತು ಇಂದು ಬೆಳಿಗ್ಗೆ ಟ್ವೀಟ್‌ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ “ಹೈದರಾಬಾದ್‌ನಲ್ಲಿ ಹಿಂದೆಂದೂ ಕಾಣದ ಭೀಕರ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್‌ನ ನಮ್ಮ ಸಹೋದರ ಸಹೋದರಿಯ ರೊಂದಿಗೆ ನಿಲ್ಲಲಿದ್ದಾರೆ. ಪರಿಹಾರ ಕಾರ್ಯಗಳಿಗಾಗಿ ದೆಹಲಿ ಸರ್ಕಾರವು ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ ದೇಣಿಗೆ ನೀಡಲಿದೆ” ಎಂದು ಘೋಷಿಸಿದ್ದಾರೆ.

    ಕೇಜ್ರಿವಾಲ್‌ರವರ ಈ ಮಾನವೀಯ ನಡೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಪ್ರಶಂಶಿಸಿದ್ದರೆ, ಇನ್ನೂ ಕೆಲವರು ತೀವ್ರ ಟೀಕೆಗೆ ಗುರಿಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap