ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಿರೀಕ್ಷಿತವಾಗಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು.
ಬೆಂಗಳೂರಿನ ಮಾರತಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ಪಾಸ್ ಕಾಮಗಾರಿಯ ಸ್ಥಳಕ್ಕೆ ದಿಡೀರ್ ಭೇಟಿ ಮಾಡಿ, ಯೋಜನೆಯ ಮಾಹಿತಿ ಪಡೆದರು. ಹಾಗೂ ಬೆಳ್ಳಂದೂರು ಬಳಿ ರಸ್ತೆಗೆ ಹಾಕಲಾಗುತ್ತಿರುವ ಟಾರ್ ಕಾಮಗಾರಿಯನ್ನು ಸಹ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವೀಕ್ಷಣೆ ಮಾಡಿದರು.