ಹಾಸನ:
ರಾಜಮನೆತನದ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ. ಸದ್ಯಕ್ಕೆ ನನ್ನ ರಾಜಕೀಯ ಪ್ರವೇಶವಿಲ್ಲ ಹಾಗೂ ರಾಜಕೀಯದ ಮೇಲೆ ನನಗೆ ಆಸಕ್ತಿಯೂ ಇಲ್ಲ ಎಂದು ತಿಳಿಸುವ ಮೂಲಕ ತಮ್ಮ ರಾಜಕೀಯ ಪ್ರವೇಶದ ಊಹಾ-ಪೋಹಗಳಿಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರು ಸ್ಪಷ್ಟನೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ನನ್ನ ಸ್ಪರ್ಧೆ ವಿಷಯ ಮಾಧ್ಯಮಗಳಿಂದ ತಿಳಿದು ಬಂದಿದೆ. ಆದರೆ, ರಾಜಕೀಯ ಸೇರುವ ವದಂತಿ ಕೇವಲ ಊಹಾಪೋಹ ಅಷ್ಟೇ. ಜನ ಸೇವೆ ಮಾಡಲು ರಾಜಕೀಯ ಬಿಟ್ಟು ಬೇರೆ ಕ್ಷೇತ್ರಗಳಿವೆ ಎಂದು ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
