ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ

 ಬೆಂಗಳೂರು: 

      ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಸ್ಪಷ್ಟ ಪಡಿಸಿದ್ದಾರೆ.

      ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ನಾನು ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಹಾಗಾಗಿ ಈ ಬಾರಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆಯೇ ಹೊರತು, ಬಿಜೆಪಿ ಪಕ್ಷದ ಸಚಿವ ಆಕಾಂಕ್ಷಿ ನಾನಲ್ಲ ಎಂದು ತಿಳಿಸಿದ್ದಾರೆ. 

      ಹಲವು ದಿನಗಳಿಂದ ಶಿವರಾಮ ಹೆಬ್ಬಾರ್ ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿಯು ಹರಿದಾಡುತ್ತಿತ್ತು. ಇದಕ್ಕೆ ಹೆಬ್ಬಾರರು ಸ್ಪಷ್ಟನೆ ನೀಡಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ಷಣದವರೆಗೆ ರಾಜೀನಾಮೆ ಕೊಡುವ ಬಗ್ಗೆ ನಿರ್ಣಯವಾಗಿಲ್ಲ ಎಂದು ತಿಳಿಸಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap