ನಾಳೆ ಕೊಡಗಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ತಂಡ

ಬೆಂಗಳೂರು:      

      ನಾಳೆ  (23) ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು  ಕೊಡಗು ಪ್ರವಾಸ ತೆರಳಿ, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ವರದಿ ಪಡೆಯಲಿದ್ದಾರೆ.

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರವಾಹ ಪೀಡಿತ ಕೊಡಗಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ತೆರಳಲಿದ್ದಾರೆ, ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್‌ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್‌ ನಾಯಕರು ಕೊಡಗಿನಲ್ಲಿ ಸಂಭವಿಸಿದ ಅನಾಹುತಗಳು, ಪರಿಹಾರ ಕ್ರಮಗಳ ಕುರಿತು ವರದಿ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಲಿದ್ದಾರೆ.

      ಈಗಾಗಲೇ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಡಿಕೇರಿ ಪ್ರವಾಸ ಕೈಗೊಂಡಿದ್ದಾರೆ, ಸಚಿವ ಸಾ.ರಾ. ಮಹೇಶ್‌ ಕೂಡಾ ಮಡಿಕೇರಿಯಲ್ಲಿಯೇ ಉಳಿದುಕೊಂಡಿದ್ದಾರೆ, ಲೋಕೋಪಯೋಗಿ ಸಚಿವ ರೇವಣ್ಣ ಪ್ರವಾಹ ಸಂತ್ರಸ್ತರ ಕಷ್ಟ ಆಲಿಸುತ್ತಿದ್ದಾರೆ.

Recent Articles

spot_img

Related Stories

Share via
Copy link
Powered by Social Snap