ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸರ್ಕಾರದಿಂದ ಸಿಹಿ ಸುದ್ದಿ….!

ಬೆಂಗಳೂರು:

    ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿಯನ್ನು 60 ತಿಂಗಳಿಗೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

      ಶಿವಮೊಗ್ಗ ಜಿಲ್ಲೆಯನ್ನು ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ರೀತಿಯಲ್ಲಿ ಪರಿಗಣಿಸಿ 21 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಸದಸ್ಯರ ಸ್ಥಾನಗಳನ್ನು ಮರು ನಿಗದಿಪಡಿಸುವ ತಿದ್ದುಪಡಿಗೆ ಸಿಎಂ ಸಿದ್ಧರಾಮಯ್ಯ ಅನುತಿ ನೀಡಿದ್ದಾರೆ ಎಂದು ಹೇಳಿದರು.

     ಕೇಂದ್ರ ಸರ್ಕಾರ ನೀಡಿದ ನಿರ್ದಿಷ್ಟ ಅರ್ಜಿ ನಮೂನೆಯಂತೆ ಬರಪೀಡಿತ ತಾಲೂಕುಗಳಲ್ಲಿ ಜಂಟಿಯಾಗಿ ಸ್ಥಳ, ಬೆಳೆ ಸಮೀಕ್ಷೆ ನಡೆಸಲು ಕಂದಾಯ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ. 75 ತಾಲೂಕುಗಳ ಆಯ್ದ 10 ಗ್ರಾಮಗಳಲ್ಲಿ ತಲಾ ಐದು ಬೆಳೆಗಳ ಸಮೀಕ್ಷೆ ನಡೆಸಲಿದ್ದು, 10 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

     ಬರಪೀಡಿತ ತಾಲೂಕುಗಳ ಆಯ್ದ 10 ಗ್ರಾಮಗಳಲ್ಲಿ ತಲಾ ಐದು ಬೆಳೆಗಳ ಸ್ಥಳ ಸಮೀಕ್ಷೆ ನಡೆಸಿ, ಶೇ.60ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದ್ದರೇ ಬರಪೀಡಿತವೆಂದು ಪರಿಗಣಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

     ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಸೆಪ್ಟೆಂಬರ್ 30ರವರೆಗೂ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಸಂಭಾವ್ಯ ಕಳವಳಕಾರಿ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದರು.

 

Recent Articles

spot_img

Related Stories

Share via
Copy link
Powered by Social Snap