ಪಾಕ್ ದಾಳಿ ಹಿನ್ನೆಲೆ : ಕರಾವಳಿಯಲ್ಲಿ ಹೈ ಅಲರ್ಟ್!!!

ಕಾರವಾರ:

      ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕ್ ನೆಲೆ ಮೇಲೆ ವಾಯು ದಾಳಿ ನಡೆಸಿ ಉಗ್ರರನ್ನು ಧ್ವಂಸಗೊಳಿಸಿದ  ಪರಿಣಾಮ ಪಾಕ್ ಕಡೆಯಿಂದಲೂ ಪ್ರತಿದಾಳಿ ಆಗುವ ಸಾಧ್ಯತೆ ಹಿನ್ನೆಲೆ ರಾಜ್ಯದ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

      ಮಂಗಳವಾರದಂದು ಪಾಕ್ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಪಡೆ ದಾಳಿಯಿಂದ ಎರಡು ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟಾಗಿದ್ದು, ಪಾಕ್ ಯಾವುದೇ ಕ್ಷಣದಲ್ಲಿ ದಾಳಿ ಮಾಡುವ ಸಾಧ್ಯತೆ ಇರುವ ಕಾರಣ ದೇಶದ ಎಲ್ಲಾ ರಕ್ಷಣಾ ನೆಲೆಗಳಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗುತ್ತಿದೆ.

      ಈ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆಯಲ್ಲೂ ಹೈ ಅಲರ್ಟ್‌ ಘೋಷಿಸಲಾಗಿದ್ದು, ನೌಕಾನೆಲೆ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕಾರವಾರ ಕದಂಬ ನೌಕಾದಳದಿಂದ ಭಾರತ ಗಡಿಗೆ ಭದ್ರತೆಗೆ ನೌಕೆಗಳು ಈಗಾಗಲೇ ತೆರಳಿವೆ ಎಂದು ನೌಕಾನೆಲೆಯ ಅಧಿಕಾರಿಯೊಬ್ಬರು ತಿಳಿಸಿದರು.

      ಏಷ್ಯಾ ಖಂಡದಲ್ಲೇ ದೊಡ್ಡದು ಎಂದು ಬಣ್ಣಿಸಲಾಗುವ ಕದಂಬ ನೌಕಾನೆಲೆಯಲ್ಲಿ ನೌಕಾ ಸೈನಿಕರು ಮತ್ತು ನೌಕಾ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲದೇ ಆಳ ಸಮುದ್ರದಲ್ಲಿ ಸುರಕ್ಷತೆಗಾಗಿ ಡಾಮಿನರ್ ಹೆಲಿಕಾಪ್ಟರ್ ಬಳಕೆ ಮಾಡಲಾಗಿದ್ದು, ಸಮುದ್ರದಲ್ಲಿ ಸಂಚರಿಸುವ ಬೋಟ್‍ಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಸುತ್ತಲಿನ ಪ್ರದೇಶಗಳಲ್ಲಿ ಆಗುವ ಎಲ್ಲ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap