ಪಾಲಿಕೆ ಉಪ ಚುನಾವಣೆ: ಶಾಮನೂರು ಸೊಸೆ ಪ್ರಚಾರ

ದಾವಣಗೆರೆ:

ದಾವಣಗೆರೆ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣಾ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಪ್ರಚಾರ ನಡೆಸಿದರು. ಪಾಲಿಕೆಯ 37ನೇ ವಾರ್ಡ್‌ನಿಂದ ರೇಖಾರಾಣಿ ಹಾಗೂ 28ನೇ ವಾರ್ಡ್‌ನಿಂದ ಹುಲ್ಲುಮನೆ ಗಣೇಶ್ ಅಭ್ಯರ್ಥಿಗಳು. ಪ್ರಭಾ ಮಲ್ಲಿಕಾರ್ಜಿನ್ ಅಭ್ಯರ್ಥಿಗಳ ಪರವಾಗಿ ಮನೆ-ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಶುಕ್ರವಾರ ಉಪ ಚುನಾವಣೆ ಮತದಾನ ನಡೆಯಲಿದೆ.

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಂಗಳವಾರ ಬೆಳಗ್ಗೆಯಿಂದಲೇ ಉತ್ಸಾಹದಿಂದಲೇ ಮತಬೇಟೆ ನಡೆಸುತ್ತಿದ್ದಾರೆ. ಕೆಟಿಜೆ ನಗರದ ಬನ್ನಿ ಮಹಾಕಾಳಮ್ಮ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಭಾ ಮಲ್ಲಿಕಾರ್ಜುನ್ ಅಭ್ಯರ್ಥಿಗಳ ಗೆಲುವಿಗೆ ಪ್ರಾರ್ಥಿಸಿದರು. ಕಳೆದ ಒಂದು ವಾರದಿಂದ ರೇಖಾ ರಾಣಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಎಲ್ಲರೂ ಕಾಂಗ್ರೆಸ್‌ಗೆ ಮತ ನೀಡಬೇಕು. ಜನರ ನಿರೀಕ್ಷೆಯೂ ಕಾಂಗ್ರೆಸ್ ಗೆಲ್ಲಿಸಬೇಕು ಎಂದಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರ ನಿರೀಕ್ಷೆಯಂತೆ ಸಮಾಜ ಸೇವೆ ಮಾಡಲು ರೇಖಾರಾಣಿ ಉತ್ಸುಹಕರಾಗಿದ್ದಾರೆ. ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಎಲ್ಲರೂ ಕಾಂಗ್ರೆಸ್ ಗೆ ನಿಮ್ಮ ಮತ ನೀಡಿ; ಹುಲ್ಲುಮನೆ ಗಣೇಶ್ ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಪ್ರಭಾ ಮಲ್ಲಿಕಾರ್ಜುನ್, “ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್, ತೈಲ ಬೆಲೆ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಪಕ್ಷ ಬಿಟ್ಟು ಹೋದವರ ಬಗ್ಗೆ ನಾವು ಯಾವ ರೀತಿ ಉತ್ತರ ಕೊಡಬಹುದು ಎಂಬುದಕ್ಕೆ ಇರುವುದು ಒಂದೇ ಅಸ್ತ್ರ ಮತದಾನ. ಪ್ರೀತಿ, ವಿಶ್ವಾಸಕ್ಕೆ ನಿಮ್ಮ ಮತ ನೀಡಿ. ಎಲ್ಲರೂ ಕಾಂಗ್ರೆಸ್‌ ಬೆಂಬಲಿಸಿ” ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link