ಪ್ರತಿಮೆ ದ್ವಂಸ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗ:

      ಭಾರತ ನವೋದಯದ ಹರಿಕಾರ ಈಶ್ವರಚಂದ್ರ ವಿದ್ಯಾಸಾಗರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಎ.ಐ.ಡಿ.ಎಸ್.ಓ. ಹಾಗೂ ಎ.ಐ.ಎಂ.ಎಸ್.ಎಸ್.ವತಿಯಿಂದ ವಿದ್ಯಾರ್ಥಿಗಳು ಒನಕೆ ಓಬವ್ವ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

      ಕೊಲ್ಕತ್ತಾದಲ್ಲಿ ಬಿಜೆಪಿ.ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ ರ್ಯಾಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಈಶ್ವರಚಂದ್ರ ವಿದ್ಯಾಸಾಗರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಆದರೆ ಅವರ ವಿಚಾರ-ಆದರ್ಶಗಳು ಎಂದಿಗೂ ನಾಶವಾಗುವುದಿಲ್ಲ. ಅಮರವಾಗಿರುತ್ತವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಕಿಡಿಗೇಡಿಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು ನಿಂಗರಾಜ್, ಕುಮಾರ್, ಸಂಜಯ್, ಕುಸುಮ, ಸುಜಾತ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link