ಹಗರಿಬೊಮ್ಮನಹಳ್ಳಿ:
ತಾಲೂಕಿನ ಬನ್ನಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷರಾಗಿ ಎಚ್.ಎಂ.ವಾಮದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಾ.ಪಂ.ಇಒ ಹಾಗೂ ಈ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾಧಿಕಾರಿಯಾದ ಮಲ್ಲಾನಾಯ್ಕ ಘೋಷಿಸಿದರು.ಈ ಹಿಂದೆ ಅಧ್ಯಕ್ಷರಾಗಿದ್ದ ಟಿ.ಪ್ರಹ್ಲಾದ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಾಣೇ ಜರುಗಿತ್ತು. 13ಜನ ಸದಸ್ಯಬಲವುಳ್ಳ ಗ್ರಾ.ಪಂ.ಗೆ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಂ.ವಾಮದೇವಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಲ್ಲಾನಾಯ್ಕ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಬೋರ್ವೆಲ್ ಗುರುಸಿದ್ದಪ್ಪ ಮಾತನಾಡಿ, ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವಾಮದೇವಯ್ಯ ಮಾತ್ರ ನಾಮಪತ್ರ ಸಲ್ಲಿಸುವಂತೆ ಮಾತು ಕೊಡಲಾಗಿತ್ತು. ಅದರಂತೆ ಪ್ರತಿಯೊಬ್ಬ ಸದಸ್ಯರು ಸಹಕರಿಸಿದ್ದಾರೆ. ಅವರಿಗೆ ಕೃತಜ್ಞತೆ ತಿಳಿಸುತ್ತಾ, ಮುಂದಿನ ದಿನಗಳಲ್ಲಿ ಗ್ರಾ.ಪಂ.ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳಿಗೆ ಅಧ್ಯಕ್ಷರು ಎಲ್ಲಾರ ವಿಶ್ವಾಸತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಗ್ರಾ.ಪಂ.ಉಪಾಧ್ಯಕ್ಷೆ ಪಿ.ಚಂದ್ರಮ್ಮ, ಸದಸ್ಯರಾದ ಟಿ.ಪ್ರಹ್ಲಾದ್, ಸಿಡ್ಲಪ್ಪ, ಹುಲುಗಪ್ಪ, ಮಲ್ಲಮ್ಮ, ಮಲ್ಲಿಕಾರ್ಜುನ, ಮೀನಾಕ್ಷಮ್ಮ, ರೇಣುಕಮ್ಮ, ಕೆ.ಗಂಗಮ್ಮ, ಎಂ.ಎಸ್.ಲಿಂಗರಾಜ್, ಮುಖಂಡರಾದ ತಾ.ಪಂ.ಮಾಜಿ ಅಧ್ಯಕ್ಷ ಸಿದ್ದಲಿಂಗನಗೌಡ, ಬಾಲಪ್ಪ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
