ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ್ ಪರ ಮತ ಯಾಚನೆ

ದಾವಣಗೆರೆ:

      ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್, ಶಾಸಕ .ಎನ್.ಲಿಂಗಣ್ಣ, ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಮತ್ತಿತರರು ಬಿಜೆಪಿ ಪರವಾಗಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.

        ಬುಧವಾರ ಬೆಳ್ಳಿಗ್ಗೆಯಿಂದಲೇ ಗೋಪನಾಳು, ಲೋಕಿಕೆರೆ, ಶ್ಯಾಗಲೆ, ಹಿರೇ ತೊಗಲೇರಿ, ಚಿಕ್ಕ ತೊಗಲೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.

       ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ, ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅಪ್ಪ-ಮಗ ಇಬ್ಬರ ಪೈಕಿ ಯಾರೂ ನಿಂತರೂ ಸರಿ, ನಮಗೆ ಕಾಂಗ್ರೆಸ್ ಪಕ್ಷವೇ ಎದುರಾಳಿಯಾಗಿದೆ ಎಂದರು.ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಎಲ್ಲೆಡೆ ಇದೆ. ದಾವಣಗೆರೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಯೂ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ. ಇಲ್ಲಿ ಅಪ್ಪನಾದರೂ ಅಭ್ಯರ್ಥಿಯಾಗಲೀ, ಮಗನೇ ಸ್ಪರ್ಧಿಸಲಿ ನಮಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಎದುರಾಳಿ ಎಂದು ಪುನರ್ ಉಚ್ಛರಿಸಿದರು.

         ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನರವರು ವಯಸ್ಸಿನಲ್ಲಿ ನನಗಿಂತಲೂ ಕಿರಯರು. ಮೊನ್ನೆ ನಮ್ಮ ಬಗ್ಗೆ ಗೌರವದಿಂದ ಮಾತನಾಡಿದ್ದನ್ನು ಗಮನಿಸಿದೆ. ಇದಕ್ಕಾಗಿ ಮಲ್ಲಿಕಾರ್ಜುನರನ್ನು ಅಭಿನಂದಿಸುತ್ತೇನೆ. ದೇವರು ಅವರಿಗೆ ಒಳ್ಳೆಯ ಬುದ್ಧಿ ನೀಡಲಿ ಎಂದರು.

        ತಾವು ಏ.4ರಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಕ್ಷದ ಮುಖಂಡರು, ಪದಾ„ಕಾರಿಗಳು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಲಿದ್ದೇವೆ. ತಮ್ಮ ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap