ಬಿಜೆಪಿ ಸರ್ಕಾರದ ಯಾವೊಂದು ಯೋಜನೆಯೂ ಜನರಿಗೆ ತಲುಪಿಲ್ಲ : ಶೆಟ್ಟರ್

ಹುಬ್ಬಳ್ಳಿ

      ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಯೋಜನೆಗಳು ಜನರಿಗೆ ತಲುಪಲಿಲ್ಲ. ‌ಮೀಸಲಾತಿಯೂ ತಲುಪಲಿಲ್ಲ.

     ಮೀಸಲಾತಿ ಅನುಷ್ಠಾನ ಮಾಡಲ್ಲಾ ಅಂತಾ ಕೋರ್ಟ್‌ಗೆ ಹೇಳಿದ್ದಾರೆ. ಇಲ್ಲಿ ಜನರಿಗೆ ಮೋಸ ಮಾಡಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ‌ಬಿಜೆಪಿ ಸರ್ಕಾರ ಯಾವುದನ್ನೂ ಕೂಡ ಸರಿಯಾಗಿ ಅನುಷ್ಠಾನಕ್ಕೆ ತರಲಿಲ್ಲ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿಲ್ಲ.

     ಕೈಗಾರಿಕೆಗೆ ಎರಡು ಹೆಕ್ಟೇರ್‌ ಜಮೀನು ಕೊಡಲು ಆಗಿಲ್ಲ. ಕೆಲಸ ಮಾಡಲು ಆಗದ ಸಿಎಂ ಯಾಕೇ ಇರಬೇಕು? ಬೊಮ್ಮಾಯಿ ನಮ್ಮವರು ಆಗಿದ್ದರು, ಆದರೆ ಅವರ ಕೈಯಲ್ಲಿ ಏನು ಮಾಡಲು ಆಗಿಲ್ಲ ಅನ್ನುವುದು ಜನರ ಭಾವನೆ ಆಗಿದೆ ಎಂದು ವ್ಯಂಗ್ಯವಾಡಿದರು.

     ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ದ್ವಿಗುಣ ಬೆಂಬಲ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ. ‌ನಾನು ಆರು ಎಲೆಕ್ಷನ್ ಮಾಡಿದ್ದೀನಿ, ಮತದಾರರಿಗೆ ಹಣ ಹಂಚಿರಲಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ, ಕುಕ್ಕರ್ ಕೊಡುತ್ತಾರೆ. ಆದರೆ ಬಿಜೆಪಿ ಹೆಸರು ಹೇಳಿಕೊಳ್ಳುವ ವ್ಯಕ್ತಿಗಳು ನಮ್ಮ ಕ್ಷೇತ್ರದಲ್ಲಿ ಹತಾಶರಾಗಿ ಹಣ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

     ಬಿಜೆಪಿಯವರು ನಮ್ಮ ಕ್ಷೇತ್ರದಲ್ಲಿ ಹಣ ಹಂಚಿದ್ದು ವೇದನೆಯಾಗಿದೆ ಎಂದ ಜಗದೀಶ್ ಶೆಟ್ಟರ್ ಇನ್ನು ಸ್ಲಮ್‌ಗಳಲ್ಲಿ ಜನರಿಗೆ ಐದು‌ನೂರು, ಸಾವಿರ ಹಣ ಕೊಟ್ಟಿದ್ದಾರೆ. ಹಣ ಬಲದ ಮೇಲೆ ಗೆಲ್ಲುವುದಾದರೆ ಬಹಳಷ್ಟು ಶ್ರೀಮಂತರೇ ಗೆಲ್ಲುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚುವ ಒಂದು ಗೀಳಾಗಿಬಿಟ್ಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap