ಬಿಲ್‌ ಕ್ಲಿಯರ್‌ ಮಾಡಲು ಸಿಎಂಗೆ ಕೆಂಪಣ್ಣ ನೇತೃತ್ವದಲ್ಲಿ ಮನವಿ

ಬೆಂಗಳೂರು:

     ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು.

     “ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜೊತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ” ಎಂದು ಸಂಘವು ಹೇಳಿದೆ.

    “ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ, ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲು ಯಾವುದೇ ತಡೆಯೊಡ್ಡಬಾರದು” ಎಂದು ಮನವಿ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap