ಬೆಂಗಳೂರು:
ಶಾಸಕ ಎನ್.ಎ.ಹ್ಯಾರಿಸ್ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಮೊಹಮದ್ ನಲಪಾಡ್ ಬ್ರಿಟನ್ಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ನಲಪಾಡ್ ಜೈಲಿನಿಂದ ಹೊರಬರಲು ಸಾಕಷ್ಟು ಕಾನೂನು ಹೋರಾಟದ ಮೂಲಕ ಹೈಕೋರ್ಟ್ನಲ್ಲಿ ಜಾಮೀನು ಪಡೆದಿದ್ದಾರೆ. ಈ ಷರತ್ತುಗಳಲ್ಲಿ ಆರೋಪಿ ನಗರ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು. ಇದೀಗ ಈ ಷರತ್ತು ಸಡಿಸುವಂತೆ ಅರ್ಜಿದಾರರು ಕೋರಿದ್ದಾರೆ.
ನಲಪಾಡ್ ಮನವಿ :
‘ನನ್ನ ತಮ್ಮ ಲಂಡನ್ನಲ್ಲಿ ಇದ್ದಾನೆ. ಅವನನ್ನು ಭೇಟಿ ಮಾಡಲು ಇದೇ 25ರಿಂದ 15 ದಿನಗಳ ಕಾಲ ತೆರಳಲು ಉದ್ದೇಶಿಸಿದ್ದೇನೆ. ಆದ್ದರಿಂದ ಅವಕಾಶ ಕಲ್ಪಿಸಬೇಕು’ ಎಂದು ನಲಪಾಡ್ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/08/mhnalapad-1527680602-152869.gif)