ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಚೆನ್ನಮ್ಮ ಅವರ ದೇಶಪ್ರೇಮ ಹೋರಾಟ ಎಲ್ಲರಿಗೂ ಅನುಕರಣೀಯ

ಜಗಳೂರು :

      ನಮ್ಮ ನಾಡು ಅನ್ಯರ ಪಾಲಾಗದೆ ನಮಗೇ ಉಳಿಯಬೇಕೆಂಬ ಗುರಿ ಇಟ್ಟುಕೊಂಡು ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶಪ್ರೇಮ ಹೋರಾಟ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

      ಪಟ್ಟಣದ ತಾಲೂಕು ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಹೆಣ್ಣು ಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ಅವರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಸ್ತ್ರೀಯರಿಗೆ ಅಂತಹದೊಂದು ಅಗಾಧ ಶಕ್ತಿ ಇದೆ. ಮಹಿಳೆಯರು ಉನ್ನತ ಸ್ಥಾನಗಳನ್ನು ಅಲಂಕ ರಿಸುವ ಮೂಲಕ ಪುರುಷರಿಗೆ ಸಮಾನವಾಗಿ ದಾಪುಗಾಲಿಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಶ್ಲಾಘಿಸಿದರು.

      ತಾಲೂಕಿನಲ್ಲಿ ಮಳೆಯಿಲ್ಲದೇ ನೀರಿನ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ 20ಕ್ಕೂ ಹೆಚ್ಚು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ನೀರಿನ ಸಮಸ್ಯೆ ಉಲ್ಬಣವಾಗಲಿದೆ. ತಾಲೂಕು ಬರಪೀಡಿತ ಪಟ್ಟಿಯಿಂದ ಬಿಟ್ಟು ಹೋಗಿತ್ತು, ಅದನ್ನು ಸೇರ್ಪಡೆಗೊಳಿಸಿದ್ದೇನೆ. 52 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿರಿಗೆರೆ ಶ್ರೀಗಳ ಒತ್ತಡದಿಂದ ಈಗಾಗಲೇ ಈ ಯೋಜನೆ ಡಿಪಿಆರ್ ಹಂತ ತಲುಪಿದೆ, ತಾಲೂಕಿನಲ್ಲಿ ಬಿಟ್ಟು ಹೋಗಿರುವ ಕೆರೆಗಳನ್ನು ಗುರುತಿಸಿ ಸೇರ್ಪಡೆಗೊಳಿಸಲಾಗುವುದು ಎಂದು ಹೇಳಿದರು.

      ಈ ಹಿಂದಿನ ಶಾಸಕರು ಅರಸೀಕೆರೆ ಭಾಗದÀ ಕೆರೆಗಳನ್ನು ಈ ಯೋಜನೆಗೆ ಸೇರಿಸಿದ್ದೇನೆ ಎಂದು ಸುಳ್ಳು ಹೇಳಿದ್ದರು. ಅದನ್ನು ಪರಿಶೀಲಿಸಿದಾಗ ಆ ಭಾಗದ ಕೆರೆಗಳು ಸೇರ್ಪಡೆಯಾಗಿರಲಿಲ್ಲ, ನಾನು ಪುನಃ ಆ ಭಾಗದ ಕೆರೆಗಳನ್ನು ಸೇರ್ಪಡೆಗೊಳಿಸಿದ್ದೇನೆ ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್‍ವಿರುದ್ದ ವಾಗ್ದಾಳಿ ಮಾಡಿದರು. ಕಳೆದ 5 ವರ್ಷಗಳಿಂದಲೂ ಪಟ್ಟಣದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಡಿಟೋಗೆ ಬೇಡಿಗೆ ಇದ್ದು, ಈಗ ನಾನೇ ಶಾಸಕನಾಗಿದ್ದೇನೆ ಶೀಘ್ರವೇ ಬಸ್ ಡಿಪೋ ಸೂಕ್ತ ನಿವೇಶನ ಗುರುತಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭಾರವಸೆ ನೀಡಿದರು.

      ನಿವೃತ್ತ ಉಪನ್ಯಾಸಕ ರಾಜಪ್ಪ ಉಪನ್ಯಾಸ ನೀಡಿಪರಂಗಿಯವರಿಂದ ನಮ್ಮ ನೆಲ-ಜಲ ರಕ್ಷಣೆ ಮಾಡಿದ ವೀರ ಮಹಿಳೆಯಾ ಗಿರುವ ಕಿತ್ತೂರು ರಾಣಿ ಚೆನ್ನಮ್ಮ ಇಂದಿನ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಆಕೆಯಲ್ಲಿದ್ದ ಛಲ, ಆತ್ಮವಿಶ್ವಾಸ, ಶೂರತ್ವ, ನಾಡು-ನುಡಿಯ ಮೇಲಿನ ಅಭಿಮಾನ ಎಲ್ಲವೂ ಯುವಜನಾಂಗಕ್ಕೆ ಆದರ್ಶಪ್ರಾಯ ಎಂದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀಧರ್‍ಮೂರ್ತಿ, ಇಒ ಜಾನಕೀರಾಮ್, ಜಿಲ್ಲಾ ಪಂಚಾಯ್ತಿ ಸದಸ್ಯ ರಾದ ಎಸ್.ಕೆ.ಮಂಜುನಾಥ್, ಶಾಂತಕುಮಾರಿ, ಉಮಾವೆಂಕಟೇಶ್, ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಅಣಬೂರು ಮಠದ ಕೊಟ್ರೇಶ್, ಸಮಾಜದ ಅಧ್ಯಕ್ಷ ಎಂ.ಎಸ್.ಪಾಟೀಲ್, ಗೌರವಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಆರ್‍ವಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೀರೇಶ್, ಕಲ್ಲೇಶ್, ತಿಪ್ಪೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ರಾದ ಯು.ಜಿ.ಶಿವಕುಮಾರ್, ಎನ್.ಎಸ್.ರಾಜು, ತಾಲೂಕು ಪಂಚಾಯ್ತಿ ಸದಸ್ಯರಾದ ಬಿದರಕೆರೆ ಬಸವರಾಜ್, ದೊಣೆಹಳ್ಳಿ ಬಸವರಾಜ್, ಸೇರಿದಂತೆ ಮತ್ತಿತರರು ಹಾಜರಿದ್ದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link